Latest

ಯಲ್ಲಾಪುರದ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ 1.20 ಲಕ್ಷ ಹಣ ಅಧಿಕಾರಿಗಳ ವಶಕ್ಕೆ

ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ಮುಂಡಗೋಡ ,ಶಿರಸಿಗಳಲ್ಲಿ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ ,ಅಷ್ಟೇ ಭರ್ಜರಿಯಾಗಿ ಅಕ್ರಮವಾಗಿ ಸಾಗಿಸುವ ಚುನಾವಣೆ ಪ್ರಯುಕ್ತ ಹಲವು ರೀತಿಯಲ್ಲಿ ಜನರಿಗೆ ಹಂಚಲು ವಸ್ತುಗಳು ಮತ್ತು ಹಣಗಳು ಸಾಗಿಸುವುದು ಸಾಮಾನ್ಯವಾಗಿದೆ, ಅವುಗಳನ್ನು ತಡೆಗಟ್ಟಲು ಚುನಾವಣಾ ಆಯೋಗದವರು ಆಯಾ ಜಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು ನಿನ್ನೆ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ,bಅರವಿಂದ ಬೇವಿನಗಿಡದ ,ಎಸ್ ಎಸ್ ಟಿ ತಂಡದ ಅಧಿಕಾರಿ ಇವರು ಉಲ್ಲೇಖಿತ ಪತ್ರದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ದಿನಾಂಕ 28 – 03 – 2024 ರಂದು ಮದ್ಯಾನ 03 ಗಂಟೆಯ ಸುಮಾರು ಶ್ರೀ ವಿಶ್ವನಾಥ ಲೊಕ್ಕಯ್ಯ ಶೆಟ್ಟಿ ಇವರು ಪ್ರಯಾಣಿಸುತ್ತಿದ್ದ ವಾಹನ ಸಂಖ್ಯೆ MH 14 JR 9755 ವಾಹನವು ಪುಣೆಯಿಂದ ಉಡುಪಿಗೆ ಹೋಗುವ ಸಮಯದಲ್ಲಿ ಸದರಿ ವಾಹನವನ್ನು ಕರ್ತವ್ಯ ನಿರತ ಎಸ್ ಎಸ್ ಟಿ ತಂಡದವರು ಮತ್ತು ಪೊಲೀಸ್ ಸಿಬ್ಬಂದಿಗಳು ತಪಾಸಣೆ ನಡೆಸಲಾಗಿ 1.20.000-00 ರೂ ಗಳನ್ನು ಯಾವುದೇ ದಾಖಲೆಗಳಿಲ್ಲದ ನಗದು ದೊರಕಿದ್ದು ಅಧಿಕೃತ ದಾಖಲೆಗಳು ಪರಿಶೀಲನಾ ಸ್ಥಳದಲ್ಲಿ ಲಭ್ಯವಿಲ್ಲದ ಕಾರಣ ನಿಯಮಾನುಸಾರ ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಎಸ್ ಎಸ್ ಟಿ ತಂಡದವರು ಪಂಚನಾಮೆಯೊಂದಿಗೆ ಉಲ್ಲೇಖಿಸಿದ್ದಾರೆ .ಈ ಹಣವನ್ನು ಯಲ್ಲಾಪುರ ಉಪಖಜಾನೆಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿಯನ್ನು ಮಾನ್ಯರ ಅವಗಾಹನೆಗಾಗಿ ಗೌರವ ಪೂರ್ವಕವಾಗಿ ಸಲ್ಲಿಸಿದೆ .

ವರದಿ: ಶ್ರೀಪಾದ್ ಎಸ್ ಏಚ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago