Latest

ತರಗತಿಯಲ್ಲೇ ಅಸ್ವಸ್ಥರಾಗಿ ಕುಸಿದು ಬಿದ್ದ 150 ಮಕ್ಕಳು!

ಹೊಸೂರು: ರಾಜ್ಯದ ಗಡಿ ಭಾಗ ಆನೇಕಲ್​ಗೆ ಹೊಂದಿಕೊಂಡ ತಮಿಳುನಾಡಿನ ಹೊಸೂರಿನಲ್ಲಿ ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್​ ಅಸ್ವಸ್ಥರಾಗಿದ್ದಾರೆ.

ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದು, ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನೀಡಲಾಗಿತ್ತು. ಊಟ ಮುಗಿಸಿ 2 ಗಂಟೆಗೆ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.

ಗಾಬರಿಗೊಂಡ ಶಿಕ್ಷಕರು ಮತ್ತು ಸಿಬ್ಬಂದಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್​ನಲ್ಲಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆತಂಕಗೊಂಡ ಪಾಲಕರು ಶಾಲೆ ಮತ್ತು ಆಸ್ಪತ್ರೆ ಬಳಿಗೆ ದೌಡಾಯಿಸಿದ್ದಾರೆ.

ಶಾಲಾ ಸಮೀಪ ಯಾವುದೋ ಕೆಮಿಕಲ್​ ಟ್ಯಾಂಕ್​ ಒಡೆದಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ಬಳಿಕ ಹಾಗೂ ಆಸ್ಪತ್ರೆಯ ವರದಿ ಬಂದ ಬಳಿಕ ಘಟನೆಗೆ ಕಾರಣ ಏನೆಂದು ತಿಳಿಯಲಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago