Latest

ಆಂಟಿಯ ಹನಿ ಟ್ರಾಪ್‌ಗೆ ಸಿಲುಕಿ 2.90 ಲಕ್ಷ ರೂ. ಸಂಬಳದ ಕೆಲಸದ ಜೊತೆ 20 ಲಕ್ಷ ಕಳೆದುಕೊಂಡ!

ರವಿ ಜಯರಾಮ್‌ ಎಂಬುವರೇ ಹನಿ ಟ್ರ್ಯಾಪ್‌ನಲ್ಲಿ ಸಿಲುಕಿ ಉದ್ಯೋಗ ಕಳೆದುಕೊಂಡಿರುವ ವ್ಯಕ್ತಿ. ಪಾರ್ಟಿಯಲ್ಲಿ ಭವಾನಿ ಅವರನ್ನು ರವಿ ಜಯರಾಮ್ ಭೇಟಿಯಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಮಹಿಳೆಗೆ ಹಣ ಸಹಾಯವನ್ನು ರವಿ ಮಾಡಿದ್ದರು. ಭವಾನಿ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದರು. ಒಟ್ಟಿಗೆ ಹತ್ತಾರು ಬಾರಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದರು. ಬಳಿಕ ಖಾಸಗಿ ವಿಡಿಯೋಗಳನ್ನು ಸೆರೆಹಿಡಿಯಲಾಗಿತು.
ನಂತರದ ದಿನಗಳಲ್ಲಿ ಭವಾನಿಯ ಅಸಲಿ ಮುಖವಾಡ ಬೆಳಕಿಗೆ ಬಂದಿದೆ. ಬ್ಲಾಕ್ ಮೇಲ್ ಮಾಡಲು ಭವಾನಿ ಗ್ಯಾಂಗ್‌ ಶುರು ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡೋದಾಗಿ ಬೆದರಿಕೆ ಹಾಕಲಾಗಿತು.
ನಿರಾಕರಿಸಿದಾಗ ದೂರುದಾರನ ಪತ್ನಿಗೂ ತಾವಿಬ್ಬರೇ ಇರುವ ಖಾಸಗಿ ವಿಡಿಯೋ ಫೊಟೋಗಳನ್ನು ಭವಾನಿ ಸೆಂಡ್ ಮಾಡಿದ್ದಳು. ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡೋದಾಗಿ ಬೆದರಿಕೆ ಹಾಕಿದ್ದಳು. ಈ ಹಿನ್ನಲೆಯಲ್ಲಿ ಹಂತ ಹಂತವಾಗಿ 20 ಲಕ್ಷ ರೂ.ಗಳನ್ನು ರವಿ ಜಯರಾಮ್ ನೀಡಿದ್ದ. ಭವಾನಿಗೆ ಸ್ವತಃ ಆಕೆಯ ತಾಯಿ, ತಮ್ಮ, ತಂಗಿ ಸೇರಿ ಇಡೀ ಕುಟುಂಬ ಸಾಥ್‌ ನೀಡಿತ್ತು.
ದೂರಿನಲ್ಲಿ ಇಡಿ ಕುಟುಂಬದ ಹೆಸರನ್ನ ರವಿ ಜಯರಾಮ್ ದಾಖಲಿಸಿದ್ದಾರೆ. ನಂತರ ಆಕೆಗೆ ಈಗಾಗಲೆ ಎರಡು ಮದುವೆ ಆಗಿರುವ ವಿಚಾರ ಗೊತ್ತಾಗಿದೆ. ಒಂದು ಡಿವೋರ್ಸ್ ಆಗಿದ್ದು ಮತ್ತೊಂದು ಡಿವೋರ್ಸ್ ಪ್ರಕರಣ ನ್ಯಾಯಾಲಯದಲ್ಲಿದೆ.
ರವಿ ಜಯರಾಮ್‌ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಬಳಿ ಕೂಡ ಭವಾನಿ ಬಂದು ಗಲಾಟೆ ಮಾಡಿದ್ದರಿಂದ, ಕಂಪನಿ ಆತನನ್ನು ಉದ್ಯೋಗದಿಂದ ವಜಾಗೊಳಿಸಿತ್ತು. ಕೊನೆಗೆ ಈಕೆ ವಿರುದ್ಧ ಜಯರಾಮ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈಕೆಯನ್ನು ಕರೆಸಿದಾಗ
ದೂರು ದಾಖಲಾದರೆ ಡಿಸಿಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಆರೋಪಿ ಭವಾನಿ ಬೆದರಿಸಿದ್ದಾರೆ. ಡಿಸಿಪಿ, ಎಸಿಪಿ ಕಚೇರಿ ಮುಂದೆಯೇ ಮಹಿಳೆ ಹೈಡ್ರಾಮಾ ಮಾಡಿದ್ದಳು.
ಇತ್ತ ಕೈತುಂಬ ಕೆಲಸವೂ ಇಲ್ಲದೆ , ಹೆಂಡತಿಯನ್ನೂ ಕಳೆದುಕೊಂಡು ರವಿ ಜಯರಾಮ್ ಅಲೆದಾಡುವ ಪರಿಸ್ಥಿತಿ ಬಂದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago