Latest

ಹನಿಟ್ರಾಪ್ ನಲ್ಲಿ 30 ಕೋಟಿ ಗಳಿಕೆ: ಈಕೆ ಬಾಯಿಬಿಟ್ಟರೆ ಸರ್ಕಾರವೇ ಉಡೀಸ್!

ಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ ರೂಪಾಯಿ ಸಂಪಾದಿಸಿದ್ದಾಳೆ. ಅಷ್ಟೇ ಅಲ್ಲ, ಕೋಟಿಗಟ್ಟಲೆ ಬೆಲೆ ಬಾಳುವ ಐಷಾರಾಮಿ ಕಾರುಗಳು, ಕುದುರೆ, ವಿದೇಶಿ ತಳಿಯ ನಾಯಿಗಳು ಈಕೆಯ ಸಂಪಾದನೆ ಪಟ್ಟಿಯಲ್ಲಿವೆ.

ಅರ್ಚನಾ ನಾಗ್ ಎಂಬ 26 ವರ್ಷದ ಮಹಿಳೆ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ವಿಚಾರಣೆ ವೇಳೆ ಆಕೆ ಬಾಯಿ ಬಿಡುತ್ತಿರುವ ಸಂಗತಿಗಳು ಸ್ವತಃ ಪೊಲೀಸರನ್ನೇ ದಂಗಾಗುವಂತೆ ಮಾಡಿದೆ. ಚಿತ್ರ ನಿರ್ಮಾಪಕರು, ಬಿಲ್ಡರ್ ಗಳು, ರಾಜಕಾರಣಿಗಳು, ಉದ್ಯಮಿಗಳು ಅಷ್ಟೇ ಯಾಕೆ ಹಲವು ಪೊಲೀಸ್ ಅಧಿಕಾರಿಗಳೇ ಈಕೆಯ ಬಲೆಗೆ ಬಿದ್ದು ಹಣ ಕಳೆದುಕೊಂಡಿದ್ದಾರೆ. ಆದರೆ ಮರ್ಯಾದೆಗೆ ಅಂಜಿ ಯಾರೂ ಕೂಡ ಈವರೆಗೆ ದೂರು ನೀಡದ ಕಾರಣ ದಂಪತಿಯ ವಂಚನಾ ಕಾರ್ಯ ನಿರಂತರವಾಗಿ ಮುಂದುವರೆದಿತ್ತು. ಕಡೆಗೂ ನಿರ್ಮಾಪಕರೊಬ್ಬರು ಸುಲಿಗೆ ದೂರು ನೀಡಿದ ಬಳಿಕ ದಂಪತಿಯ ವಂಚನೆ ಬೆಳಕಿಗೆ ಬಂದಿದೆ.

ಅರ್ಚನಾ ನಾಗ್ ಪತಿ ಜಗಬಂಧು ಚಾಂದ್ ಎಂಬಾತ ಸೆಕೆಂಡ್ ಹ್ಯಾಂಡ್ ಕಾರುಗಳ ಡೀಲರ್ ಆಗಿದ್ದು, ಹೀಗಾಗಿ ಗಣ್ಯ ವ್ಯಕ್ತಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ನಂತರ ಅವರುಗಳೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದ ಅರ್ಚನಾ ಖಾಸಗಿ ಕ್ಷಣಗಳ ವಿಡಿಯೋ, ಫೋಟೋಗಳನ್ನು ಸೆರೆಹಿಡಿಯುತ್ತಿದ್ದು ಇಬ್ಬರೂ ಸೇರಿ ದೊಡ್ಡಮಟ್ಟದ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ವಿಡಿಯೋ, ಫೋಟೋ ಬಯಲಾದರೆ ಸಮಾಜದಲ್ಲಿ ತಾವು ತಲೆಯೆತ್ತಿ ತಿರುಗಲು ಸಾಧ್ಯವಾಗುವುದಿಲ್ಲ ಎಂದು ಅಂಜುತ್ತಿದ್ದ ಗಣ್ಯ ವ್ಯಕ್ತಿಗಳು, ದಂಪತಿ ಕೇಳಿದಷ್ಟು ಹಣ ನೀಡಿ ಕೈ ತೊಳೆದುಕೊಳ್ಳುತ್ತಿದ್ದರು. ಇದೀಗ ಆರೋಪಿ ದಂಪತಿಗಳು ಕಂಬಿ ಹಿಂದೆ ಸೇರಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago