Latest

5 ಲಕ್ಷ ರೂ. ಲಂಚ ಪಡೆದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅರೆಸ್ಟ್‌

ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ ಪಡೆಯುತ್ತಿದ್ದಾಗ ವರ್ಷಾರನ್ನು ಬಂಧಿಸಲಾಗಿದೆ. ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬವರಿಂದ ವ್ಯಕ್ತಿಯೊಬ್ಬರು 2 ಎಕರೆ ಜಮೀನು ಖರೀದಿಸಿದ್ದರು.
ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು.
ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 5 ಲಕ್ಷದಂತೆ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಕಾಂತರಾಜುಗೆ ಸೂಚಿಸಿದ್ದರು. ಕಾಂತರಾಜು 5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು.
ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ ಎಂದು ರಮೇಶ್‌ ತಿಳಿಸಿದ್ದು, ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ಮೇಡಂ ವ್ಯವಹಾರ ಮುಗಿದಿದೆ ಎಂದು ಹೇಳಿದಾಗ ಹಣ ಕೊಡು ಎಂದು ವರ್ಷಾ 5 ಲಕ್ಷ ಪಡೆದುಕೊಂಡರು ಎಂದು ಹೇಳಲಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago