Latest

ಹಾವೇರಿ-ಹಾನಗಲ್ ಮಾರ್ಗದಲ್ಲಿ 7 ಕೆಜಿ ಗಾಂಜಾ ವಶ

ಹಾವೇರಿ: ಹಾವೇರಿಯಿಂದ ಹಾನಗಲ್ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 7 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹಾವೇರಿ-ಹಾನಗಲ್ ಹೆದ್ದಾರಿಯ ಶೀಗಿಹಳ್ಳಿ ಗ್ರಾಮದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದರು. ಪರಿಶೀಲನೆಯ ಸಂದರ್ಭದಲ್ಲಿ ವಿಶಾಲ ಪ್ರಮಾಣದ ಗಾಂಜಾ ಪತ್ತೆಯಾಗಿದೆ.

ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಅವರ ವಿರುದ್ಧ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಪಿಐ ಆಂಜನೇಯ ಎನ್.ಎಚ್., “ತನಿಖೆ ಮುಂದುವರಿಯುತ್ತಿದೆ. ಮಾದಕ ವಸ್ತುಗಳ ಸಾಗಣೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ” ಎಂದು ತಿಳಿಸಿದ್ದಾರೆ.

nazeer ahamad

Recent Posts

ಆರೋಪಿ ನಯಾಜ್‌ಗೆ ಠಾಣೆಯ ಸೆಲ್‌ನಲ್ಲಿ ಮೊಬೈಲ್: ಪೊಲೀಸ್ ಕಾನ್‌ಸ್ಟೆಬಲ್‌ ವರ್ಗಾವಣೆ

ಹಾವೇರಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಇಮಾಮ್‌ಸಾಬ್ ಬೆಣ್ಣೆಗೇರಿಗೆ ಪೊಲೀಸ್ ಠಾಣೆಯ ಸೆಲ್‌ನಲ್ಲಿ ಅನಧಿಕೃತವಾಗಿ…

2 hours ago

ಕೊಡಗಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು…

4 hours ago

ಜಾಲೋರ್‌ನಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಪೊಲೀಸ್ ಕಾನ್‌ಸ್ಟೆಬಲ್!

ಜಾಲೋರ್, ಮಾರ್ಚ್ 28: ಜಾಲೋರ್ ಜಿಲ್ಲೆಯ ಸರ್ವಾನಾ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಾನರಾಮ್ ಮಹಿಳೆಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್ ಆದ…

5 hours ago

ಚಿಟ್‌ ಫಂಡ್ ವಂಚನೆ: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸೇರಿದಂತೆ 15 ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಬಹುಮಟ್ಟದ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸೇರಿದಂತೆ 15…

6 hours ago

ಕ್ರೈಸ್ತ ವಿದ್ಯಾರ್ಥಿನಿಯ ಅಪಹರಣ ಆರೋಪ – ಮೊಹಮ್ಮದ್ ಅಕ್ರಮ್ ವಿರುದ್ಧ ಗಂಭೀರ ಆರೋಪ

ಉಡುಪಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಅಪಹರಣ ಸಂಬಂಧ ಗಂಭೀರ ಆರೋಪಗಳು ಎದುರಾಗಿದ್ದು, ಮೊಹಮ್ಮದ್ ಅಕ್ರಮ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಹೃತೆಯ ತಂದೆ…

7 hours ago

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರ ತೀವ್ರತೆ: 6 ಲಕ್ಷಕ್ಕೂ ಹೆಚ್ಚು ಕೋಳಿಗಳ ಸಾವಿಗೆ ಕಾರಣ

ಆಂಧ್ರಪ್ರದೇಶದ ಪೂರ್ವ ಭಾಗದಲ್ಲಿ ಹಕ್ಕಿ ಜ್ವರ (H5N1) ಸೋಂಕಿನ ಏಕಾಏಕಿ ದೃಢೀಕರಣದಿಂದ ರಾಜ್ಯದ ಕೋಳಿ ಪಂಗಡಕ್ಕೆ ದೊಡ್ಡ ಹೊಡೆತವಾಗಿದೆ. ಭಾರತೀಯ…

8 hours ago