Latest

ಲೋಕ ಅದಾಲತ್ ನಲ್ಲಿ 92 ಪ್ರಕರಣಗಳು ಇತ್ಯರ್ಥ

ಕುಂದಗೋಳ; ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯ ಪೀಠದಲ್ಲಿ ಮಾರ್ಚ್ 16 ರಂದು ಜರುಗಿದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಒಟ್ಟು 92 ರಾಜಿ ಸಂಧಾನ ಪ್ರಕರಣಗಳನ್ನು ಎರಡು ನ್ಯಾಯಾಲಯದಲ್ಲಿ ಒಟ್ಟು ರೂ 3,888,248 ಮೊತ್ತಕ್ಕೆ ಇತ್ಯರ್ಥಪಡಿಸಿಲಾಯಿತು.

ಕುಂದಗೋಳ ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಚಕ್ ಬೌನ್ಸ್ 4, ವೈವಾಹಿಕ 4, ಆಸ್ತಿ 13, ಒಟ್ಟು ಪ್ರಕರಣಗಳು 21 ರಾಜಿಯಾಗಿದ್ದು, ರಾಜಿ ಮೊತ್ತ 17,55,437 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ. ಅದರಂತೆ ದಿವಾಣಿ ನ್ಯಾಯಾಲಯದಲ್ಲಿ ಆಸ್ತಿ ಪ್ರಕರಣ 31, ಅಂತಿಮ ಡಿಕ್ರಿ 1, ಅಮಲ್ಮಾರಿ 1, ಚಕ್ ಬೌನ್ಸ್ 14, ಕಂಪೋಡೆಂಟ್ 4, ಲಘು ಪ್ರಕರಣ 12, ಕ್ರಿಮಿನಲ್ ಮಿಸಲಾನಿಸ್ 8 ಒಟ್ಟು 71 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಸಂದಾನದಲ್ಲಿ ಮೊತ್ತ 21,32,811 ಪರಿಹಾರ ಒದಗಿಸಲಾಗಿದೆ.

ಇನ್ನೂ ದಾಂಪತ್ಯದಲ್ಲಿ ಜೀವನ ನಡೆಸಬೇಕಾದ ಕುಟುಂಬದಲ್ಲಿನ ಮನಸ್ತಾಪದಿಂದ ದೂರವಾಗಿ ವಿವಾಹ ವಿಚ್ಛೇದನ ಬಯಸಿ ತಾಲೂಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಜೋಡಿಗಳು ಮೇಘಾ ಲೋಕ ಆದಾಲತ್ ನ ರಾಜಿ ಸಂಧಾನ ಮೂಲಕ ಒಂದಾದರು. ನ್ಯಾಯಾಲಯದ ಆವರಣದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡರು ಮರಳಿ ನಿಮ್ಮ ದಾಂಪತ್ಯ ಜೀವನ ಸುಖಕರವಾಗಲಿ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯದೀಶರು ಪಿ. ಜೆ ಪರಮೇಶ್ವರ ಶುಭ ಹಾರೈಸಿದರು. ಈ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯ, ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 92 ಪ್ರಕರಣಗಳು ಇತ್ಯರ್ಥಗೊಂಡಿವೆ. ನ್ಯಾಯಾಧೀಶರಾದ ಪಿ. ಜೆ. ಪರಮೇಶ್ವರ, ಶ್ರೀಮತಿ ಗಾಯತ್ರೀ ಮೇಡಂ ರಾಷ್ಟ್ರೀಯ ಲೋಕ ಆದಾಲತ್ ಯಶಸ್ವಿಗೊಳಿಸಿದರು.

ವರದಿ: ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago