ಜನಸಾಮಾನ್ಯರ ಮೇಲೆ ದರ್ಪ ತೋರಿಸೋಕೆ ಹೋದ್ರೆ ಏನಾಗುತ್ತೇ ಅನ್ನೋಕೆ ಈ ಘಟನೆಯೇ ಸಾಕ್ಷಿ. ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್​ ಜೊತೆ ಮಾತಿನ ಚಕಮಕಿ ನಡೆಸ್ತಿರೋ ಮಹಿಳೆ. ಮಾತಿಗೆ ಮಾತು ಬೆಳೆದು ಟಿಸಿ ಮುಂದೆ ಕಣ್ಣೀರು. ಮಹಿಳೆಯ ಕಣ್ಣೀರ ಕಥೆ ಕಂಡು ಟಿಕೆಟ್​ ಕಲೆಕ್ಟರ್​ ಅನ್ನ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕರು. ಇಂತದೊಂದು ದೃಶ್ಯ ಕಂಡು ಬಂದಿರೋದು ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ.
ಕೆ.ಆರ್​ ಪುರಂನ ರೈಲ್ವೇ ನಿಲ್ದಾಣದಿಂದ ಲಖನೌಗೆ ಪ್ರಯಾಣ ಬೆಳೆಸಲು ಮಹಿಳೆಯೊಬ್ಬರು ತಮ್ಮ ಲಗೇಜ್ ಸಮೇತರಾಗಿ ಆಗಮಿಸಿದ್ರು. ಈ ವೇಳೆ ಮಹಿಳೆಯನ್ನ ಕಂಡ ಟಿಕೆಟ್​ ಕಲೆಕ್ಟರ್​ ಒರ್ವ ಟಿಕೆಟ್​ ತೋರಿಸುವಂತೆ ಸೂಚಿಸಿದ್ನಂತೆ. ಈ ವೇಳೆ ಟಿಕೆಟ್​ ತೋರಿಸಿದ ಮಹಿಳೆಗೆ ಟಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ. ಟ್ರೈನ್​ ಏರುವ ಮುನ್ನವೇ ಟಿಸಿ ನನ್ನ ಬಳಿ ಟಿಕೆಟ್​ ಕೇಳಿದ್ದು ಎಷ್ಟು ಸರಿ ಅಂತ ಸಹ ಮಹಿಳೆ ಅಸಮಾಧಾನ ಹೊರಹಾಕಿದ್ದಾಳೆ. ಅಲ್ಲದೇ ಮಹಿಳೆಯನ್ನ ಚುಡಾಯಿಸುವ ದೃಷ್ಠಿಯಿಂದ ಟಿಕೆಟ್​ ಕಲೆಕ್ಟರ್​ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಮಹಿಳೆ ಆರೋಪಿಸಿದ್ದಾರೆ. ಬಳಿಕ ಮಹಿಳೆ ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡ್ತಿರೋದನ್ನ ಕಂಡ ಸಹ ಪ್ರಯಾಣಿಕರು ಟಿಸಿಯನ್ನ ತರಾಟೆಗೆ ತೆಗೆದುಕೊಂಡು ಎಳೆದಾಡಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್​ ಆಗ್ತಿದ್ದು, ಟಿಸಿ ವರ್ತನೆ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಸಿ ಮದ್ಯಪಾನ ಮಾಡಿ ಈ ರೀತಿ ವರ್ತಿಸಿದ್ದಾನೆ ಅಂತ ಸಹ ಹೇಳಲಾಗ್ತಿದೆ.
ಟಿಕೆಟ್​ ಕಲೆಕ್ಟರ್​ ಮಹಿಳೆಯೊಂದಿಗೆ ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್​ ಆಗ್ತಿದ್ದ ವೇಳೆ ಸಹ ಪ್ರಯಾಣಿಕರು ಆತನನ್ನ ಎಳೆದು ತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವಾಗ ಈ ದೃಶ್ಯ ಎಲ್ಲೆಡೆ ವೈರಲ್​ ಆಗಿ ಭಾರೀ ವಿರೋಧ ವ್ಯಕ್ತವಾಗಲು ಶುರುವಾಯ್ತೋ ತಕ್ಷಣ ಎಚ್ಚೆತ್ತ ರೈಲ್ವೇ ಅಧಿಕಾರಿಗಳು ಟಿಕೆಟ್​ ಕಲೆಕ್ಟರ್​ ಅನ್ನ ಕೆಲಸದಿಂದ ಅಮಾನತು ಮಾಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇಬೇಕು ಅನ್ನೋ ಹಾಗೆ ಮಹಿಳೆ ಮೇಲೆ ಅಧಿಕಾರದ ದರ್ಪ ತೋರಿದ ಟಿಕೆಟ್​ ಕಲೆಕ್ಟರ್​ ಕೆಲಸ ಕಳೆದುಕೊಂಡು ಮನೆ ಸೇರಿದ್ದಾನೆ.

error: Content is protected !!