ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮಹದೇವ್ ಅವರು ಕನ್ನಡ ಮಾತನಾಡಿದಕ್ಕಾಗಿ ಮರಾಠಿ ಗುಂಪಿನಿಂದ ಹಲ್ಲೆಗೊಳಗಾದ ಘಟನೆಗೆ ರಾಜ್ಯದಾದ್ಯಂತ ಕನ್ನಡಿಗರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ದೌರ್ಜನ್ಯಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಮರಾಠಿ ನಾಮಧಾರಿಯಾದ ‘ಛಾವಾ’ ಚಲನಚಿತ್ರದ ಪ್ರದರ್ಶನವನ್ನು ತಕ್ಷಣ ನಿಲ್ಲಿಸಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.

‘ಛಾವಾ’ ಚಿತ್ರ ವಿರೋಧದ ಗಟ್ಟಿ ಕೂಗು

ರೂ.130 ಕೋಟಿ ಬಜೆಟ್‌ನಲ್ಲಿ ನಿರ್ಮಿತ, ನಟಿ ರಶ್ಮಿಕಾ ಮಂದಣ್ಣ ಮತ್ತು ವಿಕ್ಕಿ ಕೌಶಲ್ ಮುಖ್ಯಪಾತ್ರದಲ್ಲಿ ನಟಿಸಿರುವ ‘ಛಾವಾ’ ಚಿತ್ರವು, ಛತ್ರಪತಿ ಶಿವಾಜಿ ಮತ್ತು ಅವರ ಪುತ್ರ ಸಂಭಾಜಿ ಜೀವನಾಧಾರಿತ ಕಥೆಯನ್ನು ಒಳಗೊಂಡಿದೆ. ದೇಶದಾದ್ಯಂತ ಈ ಚಿತ್ರ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಆದರೆ, ಬೆಳಗಾವಿಯಲ್ಲಿನ ಕನ್ನಡಿಗರ ಮೇಲೆ ನಡೆದ ಹಲ್ಲೆಯ ಪರಿಣಾಮವಾಗಿ, ಕರ್ನಾಟಕದಲ್ಲಿ ಈ ಚಿತ್ರದ ಪ್ರದರ್ಶನಕ್ಕೆ ತಡೆ ವಿಧಿಸಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಹೋರಾಟಗಾರರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಅಭಿಯಾನ ನಡೆಸುತ್ತಿದ್ದು, ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಈ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ.

ಚಿತ್ರರಂಗದ ಪ್ರತಿಕ್ರಿಯೆ ಹಾಗೂ ಮುಂದಿನ ಹಾದಿ

ಈ ಪರಿಸ್ಥಿತಿಯಲ್ಲಿ, ‘ಛಾವಾ’ ಚಿತ್ರ ಪ್ರದರ್ಶನ ನಿಲ್ಲಿಸುವ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಧಾರ ಮಹತ್ವ ಪಡೆಯಲಿದೆ. ಚಿತ್ರರಂಗದ ಅನೇಕ ಮಂದಿ ಈ ವಿವಾದದ ಬಗ್ಗೆ ಮೌನ ವಹಿಸಿರುವಂತಿದ್ದರೂ, ರಾಜ್ಯದಲ್ಲಿ ಕನ್ನಡಿಗರ ಹಕ್ಕುಗಳ ಕುರಿತು ಉಭಯಪಕ್ಷೀಯ ಚರ್ಚೆ ನಡೆಯುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

Related News

error: Content is protected !!