ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಭರಮಸಾಗರ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಆದೇಶ
ಶನಿವಾರ ತಡರಾತ್ರಿ ದೇವರಾಜ್‌ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತ್ತಾದರೂ, ಚಿತ್ರದುರ್ಗದ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಂಗಾಧರ ಬಡಿಗೇರ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು.

ಆರೋಪಗಳ ವಿವರ
ಸಂತ್ರಸ್ತ ಮಹಿಳೆಯರ ದೂರಿನ ಪ್ರಕಾರ, ದೇವರಾಜ್‌ ಅವರು ಪದೇಪದೇ ಲೆಕ್ಕಪತ್ರ ನೀಡುವಂತೆ ಒತ್ತಾಯಿಸುತ್ತಾ, ಮೈಮುಟ್ಟಲು ಹಾಗೂ ಪಕ್ಕದಲ್ಲಿ ಕುಳಿತುಕೊಳ್ಳಲು ಯತ್ನಿಸುತ್ತಿದ್ದರು. ಅಲ್ಲದೆ, ಸಾರ್ವಜನಿಕ ಸಮ್ಮುಖದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.

ಇದೇ ವೇಳೆ, ದ್ವಿತೀಯ ದರ್ಜೆ ಸಹಾಯಕ (SDA) ಜಯರಾಮ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪವೂ ದೇವರಾಜ್‌ ಮೇಲೆ ಕೇಳಿಬಂದಿದ್ದು, ಈ ಸಂಬಂಧ ಭರಮಸಾಗರ ವೃತ್ತ ನಿರೀಕ್ಷಕ ಪಿ. ಪ್ರಸಾದ್‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Related News

error: Content is protected !!