
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕಳವು ಆರೋಪ ಮಾಡಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಚಕಿತಗೊಳಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರು ಯಾರು?
ಪೊಲೀಸರು ಸ್ಥಳೀಯ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾ.18ರಂದು ಈ ಅಮಾನುಷ ಕೃತ್ಯ ನಡೆದಿದ್ದು, ವಿಜಯನಗರ ಜಿಲ್ಲೆಯ ದಲಿತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ವೈರಲ್ – ತನಿಖೆ ತೀವ್ರಗೊಳಿಸಿದ ಪೊಲೀಸರು
ವಿಡಿಯೋ ಪರಿಶೀಲಿಸಿದ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಲಕ್ಷ್ಮೀಬಾಯಿ ಎಂಬ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಮಹಿಳೆಗೆ ಹಲ್ಲೆ ನಡೆಸಿರುವುದು ಬಹಿರಂಗವಾಗಿದೆ. ನಂತರ ಇತರೆ ಸ್ಥಳೀಯರು ಸೇರಿ, ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ.
ಇದು ಉತ್ತರ ಪ್ರದೇಶವಲ್ಲ, ಕರಾವಳಿಯ ಮೀನುಗರಿಕಾ ಬಂದರು ಪ್ರದೇಶ ಮಲ್ಪೆಯಲ್ಲಿ.
ಜಿಲ್ಲಾಡಳಿತ ಏನು ಮಾಡುತ್ತಿದೆ ? @siddaramaiah ರವರೇ ?
ಮೀನು ಕದ್ದ ಆರೋಪದಡಿ ಪರಿಶಿಷ್ಟ ಜಾತಿಯ ಲಂಬಾಣಿ ಜನಾಂಗದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ತಳಿಸುತ್ತಿದ್ದಾರೆ. pic.twitter.com/AZn2AgnbRq— ಕರುನಾಡಿನ ಮಿನುಗುವ ನಕ್ಷತ್ರ💛❤️ (@NaadaPremiSha) March 19, 2025
ಉಳಿದ ಆರೋಪಿಗಳಿಗೂ ಬಲೆ ಬೀಸಿದ ಪೊಲೀಸರು
ಈ ಪ್ರಕರಣದಲ್ಲಿ ಹಲ್ಲೆ ನಡೆಸಿದ ಉಳಿದವರನ್ನು ಪತ್ತೆ ಹಚ್ಚಲು ಪೊಲೀಸರು ವಿಡಿಯೋ ಸಾಬೀತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳು ಪತ್ತೆಯಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ಪಿ ಡಾ.ಕೆ.ಅರಣ್ ತಿಳಿಸಿದ್ದಾರೆ.
ಈ ಘಟನೆಯು ಸಮಾಜದಲ್ಲಿ ಶೋಕ ಮತ್ತು ಆಕ್ರೋಶ ಹುಟ್ಟಿಸಬಹುದಾದ ನಕಾರು ಮನಸ್ಥಿತಿಯ ಉದಾಹರಣೆ ಎಂದು ಪರಿಗಣಿಸಲಾಗುತ್ತಿದೆ.