Latest

ಚಾಕ್ಲೇಟ್ ಆಮಿಷ ಒಡ್ಡಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ!

ಮನೆಯಲ್ಲಿ ಯಾರೂ ಹಿರಿಯರು ಇಲ್ಲದ ವೇಳೆ ಬಾಲಕಿಗೆ ಚಾಕ್ಲೇಟ್ ಕೊಡಿಸುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ ಹೀನಾಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ. ಕಳೆದ ಫೆಬ್ರವರಿ ೧೪ರಂದು ಘಟನೆ ನಡೆದಿದೆ. ೨ನೇ ತರಗತಿಯಲ್ಲಿ ಕಲಿಯುತ್ತಿರುವ ಏಳು ವರ್ಷದ ಬಾಲಕಿಗೆ ಅವತ್ತು ಶಾಲೆ ರಜೆ ಇದ್ದ ಕಾರಣ. ಆಕೆಯ ತಂದೆ-ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಮಗುವಿಗೆ ನೀನು ಇಲ್ಲೇ ಮನೆಯಲ್ಲಿ ಆಟವಾಡುತ್ತಿರು ಎಂದು ಹೇಳಿ ಹೋಗಿದ್ದರು. ಆ ದಿನ ಮಧ್ಯಾಹ್ನ 1:00ರ ಸುಮಾರಿಗೆ ಮನೆಗೆ ಬಂದಾಗ ಬಾಲಕಿ ಅಳುತ್ತಿರುವುದು ಕಂಡುಬಂತು. ತೀವ್ರ ಯಾತನೆಯಿಂದ ನರಳುತ್ತಿದ್ದ ಆಕೆಯನ್ನು ವಿಚಾರಿಸಿದಾಗ ಆಕೆ ಅಲ್ಲಿ ನಡೆದ ಘನ ಘೋರ ಘಟನೆಯನ್ನು ವಿವರಿಸಿದಳು. ಮಧ್ಯಾಹ್ನ ೧೨ ಗಂಟೆಯ ಹೊತ್ತಿಗೆ ಪಕ್ಕದ ಮನೆಯ ನಾಗ ಎಂಬ ವ್ಯಕ್ತಿ ಚಾಕ್ಲೇಟ್ ನೀಡುವ ಆಮಿಷ ಒಡ್ಡಿ ದೇವಸ್ಥಾನದ ಪಕ್ಕದ ಬಚ್ಚಲು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಬೆಳಕಿಗೆ ಬಂತು. ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಕಾಮುಕ ನಾಗನನ್ನು ಹುಡುಕಿಕೊಂಡು ಹೋದಾಗ ಆತ ಯಾವುದೋ ರಿಕ್ಷಾ ಹತ್ತಿ ಹೋಗಿರುವುದು ತಿಳಿಯಿತು. ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದಾಗ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಇನ್ನು ಭಯದಲ್ಲೇ ಇದ್ದಾಳೆ. ಈ ಕುರಿತು ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago