Latest

ಮೋಜಿಗಾಗಿ ಕಳ್ಳತನ ಮಾಡುವ ಫ್ಯಾಮಿಲಿ: ಕಥೆ ಕೇಳಿ ಪೊಲೀಸರೇ ಶಾಕ್

ಸಿಲಿಕಾನ್‌ ಸಿಟಿಯಲ್ಲಿ ಎಷ್ಟೇಲ್ಲಾ ಕಳ್ಳತನ ಪ್ರಕರಣಗಳನ್ನು ನೋಡಿರುತ್ತೇವೆ ಆದರೆ ಮನೆಮಂದಿಯಲ್ಲಾ ಕಳ್ಳತನದ ಕೆಲಸಕ್ಕೆ ಇಳಿಯುವುದು ನೋಡಿದ್ರೆ ಆಶ್ಚರ್ಯವಾಗುತ್ತೆ. ಪಿಕ್ ಪಾಕೆಟ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ತಂಡದ ವಿಚಾರಣೆ ಮಾಡಿದ ಪೊಲೀಸರಿಗೆ ಅವರ ಇಡೀ ಕುಟುಂಬವೇ ಕಳ್ಳತನ ಮಾಡುವ ಕುಟುಂಬ ಎಂದು ತಿಳಿದು ಪೊಲೀಸರೇ ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಸ್.ಆರ್ ನಗರದ ಪೊಲೀಸರು ಪಿಕ್ ಪಾಕೆಟ್ ಪ್ರಕರಣದಲ್ಲಿ ತಂಡವೊಂದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಷಯ ಹೊರಬಿದ್ದಿದೆ. ಗಂಡ, ಹೆಂಡತಿ, ಅಣ್ಣ, ಭಾವ, ಮಕ್ಕಳು ಸೇರಿದಂತೆ ಆ ಕುಟುಂಬದ ಪ್ರತಿಯೊಬ್ಬರು ಕೂಡಾ ಕಳ್ಳರೇ ಆಗಿದ್ದರು. ಕಳ್ಳತನವೇ ಇವರ ಫುಲ್ ಟೈಂ ಜಾಬ್ ಆಗಿತ್ತು. ಅದರಿಂದಲೇ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂಬ ವಿಷಯವನ್ನು ಕೇಳಿ ಪೊಲೀಸರು ಇಂತಹವರು ಇರುತ್ತಾರ ಎಂದು ದಂಗಾಗಿದ್ದಾರೆ.
ಬನಶಂಕರಿ ನಿವಾಸಿಗಳಾದ ವೇಲು, ಸುಂದರ್‌ರಾಜ್, ಮಹೇಶ್, ಸೇರಿದಂತೆ ಎಲ್ಲರೂ ಬೆಳಗಾದರೆ ಒಟ್ಟಿಗೆ ಒಂದು ಮೀಟಿಂಗ್ ಮಾಡುತ್ತಾರೆ. ಇಂದು ಯಾರು ಯಾವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಯಾವ ಬಸ್ ರೂಟ್ ಅಲ್ಲಿ ಪಿಕ್‌ಪಾಕೆಟ್ ಮಾಡಬೇಕು ಎಂಬುದನ್ನು ನಿರ್ಧರಿಸಿ ಕುಟುಂಬದ ಎಂಟೂ ಜನ ಬೇರೆ ಬೇರೆ ಕಡೆ ತೆರಳುತ್ತಿದ್ದರು. ಅದರಂತೆ ಕೆಲವರು ಜನರ ಗಮನವನ್ನು ಬೇರೆಡೆ ಸೆಳೆಯುವಂತೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದರೆ ಇನ್ನೂ ಕೆಲವರು ರಶ್ ಇರುವ ಬಿಎಂಟಿಸಿ ಬಸ್‌ಗಳಲ್ಲಿ ಹತ್ತಿಕೊಂಡು ಪರ್ಸ್, ಮೊಬೈಲ್‌ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.
ಸಂಜೆ ಕದ್ದ ಮಾಲನ್ನು ಮಾರಿ ಬಿಂದಾಸ್ ಜೀವನ ನಡೆಸುತ್ತಿದ್ದರು. ಪರ್ಸ್, ಮೊಬೈಲ್, ಸಣ್ಣ ಪ್ರಮಾಣದ ಹಣಗಳನ್ನು ಕದ್ದರೆ ಜನರು ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಅಲ್ಲದೇ ಇಂತಹ ಸಣ್ಣ ಪುಟ್ಟ ವಿಷಯಗಳಿಗೆ ಪೊಲೀಸರಿಗೆ ದೂರು ನೀಡುವುದಿಲ್ಲ ಎಂಬ ಧೈರ್ಯದ ಮೇಲೆ ಇದನ್ನೇ ಫುಲ್‌ಟೈಂ ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಖತರ್‌ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago