ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ. ಹೊಸಹೂಳಲು ಗ್ರಾಮದ 73 ವರ್ಷದ ನಿಂಗೇಗೌಡ ಎಂಬವರೇ ವಿಷ ಸೇವಿಸಿದ ರೈತನಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಂಗೇಗೌಡ 4 ಎಕರೆ ಜಮೀನು ಹೊಂದಿದ್ದು, ಅಂತರ ಸಂತೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಕಬ್ಬಿನ ಬೆಳೆ ಸಾಲಕ್ಕೆ ಅರ್ಜಿ ಹಾಕಿದ್ದರು. ಒಂದು ತಿಂಗಳ ನಂತರ ಬ್ಯಾಂಕಿನವರು ಸಿಬಿಲ್ ರೇಟ್ ಕಡಿಮೆ ಇದೆ ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರಗೊಂಡ ನಿಂಗೇಗೌಡ ಬ್ಯಾಂಕಿನಲ್ಲಿಯೇ ವಿಷ ಸೇವಿಸಿ ಅಸ್ವಸ್ಥರಾದರು. ಕೂಡಲೇ ಬ್ಯಾಂಕಿನ ಸಿಬ್ಬಂದಿ ನಿಂಗೇಗೌಡರ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದರು. ನಂತರ ಅಸ್ವಸ್ಥಗೊಂಡ ನಿಂಗೇಗೌಡರನ್ನು ಎಚ್.ಡಿ. ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿರುತ್ತಾನೆ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…