Latest

ಕೆಲಸದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಕೆ ಶ್ರೀಜಾ (48) ವಯಕೋಮ್​ನ ಪೊಲಸ್ಸೆರಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ಹೊರೆ ತಾಳಲಾರದೆ ಬಡ್ತಿ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಶ್ರೀಜಾ ಅವರು ಮನವಿ ಮಾಡಿದ್ದರು. ಆದರೆ, ಮನವಿಯನ್ನು ತಿರಸ್ಕರಿಸಿದ ಪರಿಣಾಮ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸಂಬಂಧಿಕರು ದೂರಿದ್ದಾರೆ.
ವೈಯಕಂ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಜಾ ಅವರು ಜೂ.1ರಂದು ಕೀಜೂರು ಜಿಎಲ್‌ಪಿಎಸ್‌ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿದ್ದರು. ಮರುದಿನವೇ ಕೆಲಸಕ್ಕೆ ಸೇರಿದ್ದರು. ಹೆಚ್ಚಿನ ಜವಾಬ್ದಾರಿಯುತ ಕೆಲಸದ ಒತ್ತಡ ತಾಳಲಾರದೆ ರಜೆ ತೆಗೆದುಕೊಂಡಿದ್ದರು. ಇದಾದ ಬಳಿಕ ಜುಲೈ 7 ರಂದು ಶಿಕ್ಷಣ ಸಚಿವರಿಗೆ ಅರ್ಜಿಯನ್ನು ಸಲ್ಲಿಸಿ ತನ್ನ ಪತಿಯ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಬಡ್ತಿಯನ್ನು ರದ್ದುಗೊಳಿಸುವಂತೆ ಕೇಳಿದ್ದರು. ಆಕೆ ಹಿಂದೆ ವೈಯಕಂನಲ್ಲಿ ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಿಸಬೇಕೆಂಬುದು ಆಕೆಯ ಬೇಡಿಕೆಯಾಗಿತ್ತು. ಆದರೆ, ಅರ್ಜಿಯನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಕುರವಿಲಂಗಾಡ್ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಜಾ ಅವರಿಗೆ ಉತ್ತರಿಸಿದ್ದರು.
ಮನವಿ ತಿರಸ್ಕರಿಸಿದ್ದರಿಂದ ತೀವ್ರವಾಗಿ ಮನನೊಂದಿದ್ದ ಶ್ರೀಜಾ ಕೆಲವು ದಿನಗಳವರೆಗೆ ಸರಿ ಹೋಗಬಹುದು ಅಂತಾ ಹೇಗೋ ಕೆಲಸ ಮಾಡಿಕೊಂಡು ಬಂದಿದ್ದರು. ಆದರೆ, ಕೆಲಸದ ಹೊರೆ ಕಡಿಮೆಯಾಗದ ಕಾರಣ, ತೀವ್ರವಾಗಿ ಮನನೊಂದು ಶುಕ್ರವಾರ ಆತ್ಮಹತ್ಯೆಯ ಮಾಡಿಕೊಂಡ ಘಟನೆ ಕೇರಳದ ವಯಕೋಮ್​ನಲ್ಲಿ ನಡೆದಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago