Latest

ಮೇಕಪ್ ಮಾಡಿದ ಅವಾಂತರ; ಮದುವೆಗೆ ಸಿದ್ಧವಾಗಿದ್ದ ಮಹಿಳೆ ಮುಖವಾಯಿತು ವಿಕಾರ!

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯುವತಿ ಒಬ್ಬರಿಗೆ ಮಾರ್ಚ್ 2ನೇ ತಾರೀಕು ಮದುವೆ ನಿಶ್ಚಯವಾಗಿರುತ್ತದೆ ಇದೇ ಕಾರಣದಿಂದಾಗಿ ಸುಂದರವಾಗಿ ಕಾಣಿಸಿಕೊಳ್ಳಲು ಯುವತಿ 10 ದಿನ ಮೊದಲೇ ಬ್ಯೂಟಿ ಪಾರ್ಲರ್ಗೆ ಹೋಗಿ ಫೇಶಿಯಲ್ ಮಾಡಿಸಿಕೊಂಡಿರುತ್ತಾರೆ. ಇದನ್ನು ಮಾಡಿಸಿಕೊಂಡ ಮರುದಿನವೇ ಅವರಿಗೆ ಅಚ್ಚರಿಯೊಂದು ಕಾದಿರುತ್ತದೆ. ಅದೇನೆಂದರೆ, ಸುಂದರವಾಗಬೇಕಿದ್ದ ಮುಖ ವಿಕಾರವಾಗಿರುತ್ತದೆ.

ಫೇಶಿಯಲ್ ಮಾಡಿಸಿಕೊಂಡ ಕಾರಣ ಮುಖವೆಲ್ಲ ಸುಟ್ಟಂತಾಗಿ ಕಪ್ಪಾಗುವುದಲ್ಲದೆ ಊದಿಕೊಂಡಿರುತ್ತದೆ. ಈ ವಿಚಾರವನ್ನು ತಿಳಿದ ಗಂಡಿನ ಕಡೆಯವರು ಮದುವೆಯನ್ನು ಕ್ಯಾನ್ಸಲ್ ಮಾಡಲು ಮುಂದಾಗುತ್ತಾರೆ ನಂತರ ಯುವತಿಯು ಬ್ಯೂಟಿ ಪಾರ್ಲರ್ ಅವರ ವಿರುದ್ಧ ದೂರನ್ನು ದಾಖಲಿಸಿದ್ದು ಮಾತುಕತೆಯಲ್ಲಿ ರಜೆ ಮಾಡಿಕೊಂಡಿರುತ್ತಾರೆ. ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಕೆಮಿಕಲ್ ರಿಯಾಕ್ಷನ್ ನಿಂದ ಈ ರೀತಿ ಆಗಿರುವುದು ಮೇಕಪ್ ಮಾಡುವ ಮೊದಲು ಅವರ ಚರ್ಮದ ಬಗ್ಗೆ ತಿಳಿಯಬೇಕು ಹಾಗೂ ಅವರು ಯಾವ ಕ್ರೀಮ್ಗಳನ್ನು ಬಳಸುತ್ತಿದ್ದಾರೆ ಎಂದು ಅರಿತು ಮೇಕಪ್ ಮಾಡಬೇಕು ಇಲ್ಲವಾದಲ್ಲಿ ಇಂತಹ ಸಮಸ್ಯೆಗಳು ಆಗುತ್ತವೆ ಎಂದು ತಿಳಿಸಿರುತ್ತಾರೆ. ಹಾಗೂ ಚಿಕಿತ್ಸೆ ನೀಡಿದ ಕೆಲವು ದಿನಗಳ ಬಳಿಕ ಮಹಿಳೆಯ ಮುಖ ಮೊದಲಿನಂತೆ ಆಗುವುದು ಎಂದು ವೈದ್ಯರು ಹೇಳಿರುತ್ತಾರೆ.
ಗಂಡಿನ ಕಡೆಯವರು ಯುವತಿಯ ಸಂಬಂಧಿಕರಾಗಿದ್ದ ಕಾರಣ ಈ ವಿಚಾರವನ್ನು ತಿಳಿದ ಮೇಲೆ ಮದುವೆಯನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿ ನಂತರ ಮಾಡೋಣ ಎಂದು ಒಪ್ಪಿಕೊಂಡಿರುತ್ತಾರೆ.

ಒಟ್ಟಿನಲ್ಲಿ ಮಹಿಳೆಗೆ ಮೇಕಪ್ ಮಾಡಿದ ಅವಾಂತರದ ವಿಚಾರವೀಗ ವೈದ್ಯರು ನೀಡಿದ ಭರವಸೆಯ ಮೇಲೆ ಹಾಗೂ ಗಂಡಿನವರು ಪುನಹ ಮದುವೆಗೆ ಒಪ್ಪಿರುವ ಕಾರಣ ಈ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಹೇಳಬಹುದು.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago