Latest

ಅಪ್ರಾಪ್ತ ಸ್ನೇಹಿತೆ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ.

ವೈದ್ಯರೊಬ್ಬರ ಅಪ್ರಾಪ್ತ ಮಗಳ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಉತ್ತರಪ್ರದೇಶದ ಕಾನ್ಪುರದ ಬರ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಕ್ಕಾ ಬಾರ್‌ನಲ್ಲಿ ನಡೆದಿದೆ.
ಇಲ್ಲಿನ ಬರ್ರಾ ನಿವಾಸಿಯಾಗಿರುವ ಇನ್‌ಸ್ಟಾಗ್ರಾಮ್ ಸ್ನೇಹಿತ ತನ್ನ ಮಗಳನ್ನು ಹುಕ್ಕಾ ಬಾರ್‌ಗೆ ಆಹ್ವಾನಿಸಿದ್ದನು. ಬಾರ್​ನಲ್ಲಿ ಆಕೆಯ ಸ್ನೇಹಿತರು ಆಕೆಗೆ ನಿದ್ರೆ ಮಾತ್ರೆ ಹಾಕಿರುವ ತಂಪು ಪಾನೀಯವನ್ನು ಕುಡಿಯುವಂತೆ ಒತ್ತಾಯಿಸಿದ್ದಾರೆ. ಈಕೆ ಹಲವು ಬಾರಿ ನಿರಾಕರಿಸಿದರೂ ಆಕೆಯ ಸ್ನೇಹಿತರು ಕುಡಿಯುವಂತೆ ಒತ್ತಾಯಿಸಿದ್ದರು. ನಂತರ ಬಾಲಕಿ ಪ್ರಜ್ಞಾಹೀನಳಾಗಿದ್ದಾಳೆ. ಈ ವೇಳೆ ಆಕೆಯ ಸ್ನೇಹಿತ ಹಾಗೂ ಮತ್ತು ಆತನ ಗೆಳೆಯರು ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ.
ಈ ವೇಳೆ ಬಾಲಕಿಯು ಪ್ರತಿರೋಧ ವ್ಯಕ್ತಪಡಿಸಿದ್ದು, ಆಗ ಯುವಕರು ಆಕೆಯ ಕೆನ್ನೆ ಮತ್ತು ಹಣೆಯ ಮೇಲೆ ಗಾಯಗೊಳಿಸಿದ್ದಾರೆ. ಬಳಿಕ ಬಾಲಕಿ ಹೇಗೋ ಅವರ ಕೈಯಿಂದ ತಪ್ಪಿಸಿಕೊಂಡು ತನ್ನ ಮನೆ ಆಗಮಿಸಿದ್ದಾಳೆ. ಆದ ಘಟನೆ ಬಗ್ಗೆ ತನ್ನ ತಂದೆಯಲ್ಲಿ ವಿವರಿಸಿದ್ದಾಳೆ. ಅಷ್ಟೇ ಅಲ್ಲದೆ ಆರೋಪಿ ಇನ್‌ಸ್ಟಾಗ್ರಾಮ್ ಸ್ನೇಹಿತ ನನ್ನ ಅಶ್ಲೀಲ ವಿಡಿಯೋ ಸೆರೆ ಹಿಡಿದು ಕೆಲವು ದಿನಗಳಿಂದ ಬ್ಲಾಕ್‌ಮೇಲ್ ಮಾಡುತ್ತಿದ್ದ. ಜೊತೆಗೆ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತನ್ನ ತಂದೆ ಬಳಿ ಹೇಳಿದ್ದಾಳೆ.
ಕಳೆದ ಶುಕ್ರವಾದ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಂದೆ ಎಂಟು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago