ಮುಲಾಯಂ ಸಿಂಗ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ. ಈತನಿಗೆ ಆನ್ಲೈನ್ನಲ್ಲಿ ಲೂಡೋ ಆಡುವ ಅಭ್ಯಾಸವಿತ್ತು. ಹೀಗೆ ಆಟವಾಡುವಾಗ ಗೇಮ್ ಆಯಪಲ್ಲಿ ಪಾಕ್ ಯುವತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆ ನಿರ್ಧಾರಕ್ಕೆ ಬಂದಿದ್ದರು. ಗೆಳತಿ ಪಾಕಿಸ್ತಾನದಲ್ಲಿದ್ದ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನ ಅರಿತಿದ್ದ ಮುಲಾಯಂ ಸಿಂಗ್ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಇಕ್ರಾಳನ್ನು ಕರೆಸಿಕೊಂಡಿದ್ದ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದರು. ಬಳಿಕ ರೈಲಿನ ಮುಖಾಂತರ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.
ಇತ್ತ ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಕರೆ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್ಆರ್ಆರ್ಒ ಸುಪರ್ದಿಗೆ ಒಪ್ಪಿಸಿದ್ದರು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಿಸಿರಲಿಲ್ಲ. ಈಕೆ ಪಾಕ್ ಪ್ರಜೆ ಎಂಬುದು ಸಾಬೀತಾದ ಹಿನ್ನೆಲೆ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಲಾಗಿದೆ. ಇನ್ನೂ ಗಡಿಪಾರು ಮಾಡುವ ಸಂದರ್ಭದಲ್ಲಿ ಇಕ್ರಾ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದು ಪೊಲೀಸರ ಮುಂದೆ ಅಂಗಲಾಚಿದ್ದಾಳೆ. ನಂತರ ಪೊಲೀಸರು ಆಕೆಯ ಮನವೊಲಿಸಿ ಗಡಿಪಾರು ಮಾಡಿ ಬಂದಿದ್ದಾರೆ ಎನ್ನಲಾಗಿದೆ.
ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯ ತಂದ ಆರೋಪದಡಿ ಜೈಲಿಗೆ ಕಳುಹಿಸಲಾಗಿದೆ. ತನಿಖೆಯ ವೇಳೆ ಈಕೆ ರವಾ ಯಾದವ್ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದ ವಿಚಾರ ಸಹ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್ಪೋರ್ಟ್ ಪಡೆಯಲು ಅರ್ಜಿ ಸಲ್ಲಿಸಿದ್ದ ವಿಷಯ ಸಹ ಬಯಲಾಗಿತ್ತು.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…