Latest

ಸ್ನೇಹಿತನ ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳಿಸಿದ; ವೆರಿ ಗುಡ್ ಎಂದ ಪ್ರೇಯಸಿ.

ಯುವತಿಯ ವಿಚಾರಕ್ಕಾಗಿ ಜಗಳವಾಗಿದ್ದು ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಂದು ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳುಹಿಸಿರುವಂತಹ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.
ಹರಿಹರ ಕೃಷ್ಣ ಮತ್ತು ನವೀನ್ ಇವರು ಸ್ನೇಹಿತರಾಗಿರುತ್ತಾರೆ. ಕಾಲೇಜಿನಲ್ಲಿ ಓದುತ್ತಿರುವಂತಹ ಸಂದರ್ಭದಲ್ಲಿ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಾರೆ ಆದರೆ ನವೀನ್ ಮೊದಲು ಹೋಗಿ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಯುವತಿ ಸಹ ಒಪ್ಪಿರುತ್ತಾಳೆ. ಇದಾದ ಬಳಿಕ ಎರಡು ವರ್ಷಗಳ ಕಾಲ ಇಬ್ಬರು ಜೊತೆಯಲ್ಲೇ ಇರುತ್ತಾರೆ ನಂತರ ಅವರು ಬೇರ್ಪಡುತ್ತಾರೆ. ಈ ಸಂದರ್ಭದಲ್ಲಿ ಹರಿಹರ ಕೃಷ್ಣ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಆಕೆಯೂ ಸಹ ಒಪ್ಪುತ್ತಾಳೆ. ಇವರಿಬ್ಬರ ಲವ್ ಸ್ಟೋರಿ ಶುರುವಾಗುವಷ್ಟರಲ್ಲಿ ನವೀನ್ ಪುನಹ ಆಕೆಗೆ ಮೆಸೇಜ್ ಮಾಡುವುದು ಕರೆ ಮಾಡುವುದನ್ನು ಮಾಡುತ್ತಾನೆ.
ಈ ವಿಚಾರದಿಂದ ಬೇಜಾರಾಗಿದ್ದ ಹರಿಹರ ಕೃಷ್ಣ ಮೂರು ತಿಂಗಳಿಂದ ಸರಿಯಾದ ಸಮಯಕ್ಕೆ ಕಾದು ಕುಳಿತಿರುತ್ತಾನೆ, ಫೆಬ್ರವರಿ 17ರಂದು ನವೀನನನ್ನು ಭೇಟಿಯಾಗಿ ಪಾರ್ಟಿಯ ನೆಪದಲ್ಲಿ ಚೆನ್ನಾಗಿ ಕಂಠಪೂರ್ತಿ ಕುಡಿದಿರುತ್ತಾರೆ. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ರೊಚ್ಚಿಗೆದ್ದ ಹರಿಹರ ಕೃಷ್ಣ ತನ್ನ ಸ್ನೇಹಿತ ನವೀನನನ್ನೇ ಕೊಲೆ ಗೈದಿದ್ದಾನೆ. ನಂತರ ಅವನನ್ನು ಬೆತ್ತಲೆ ಮಾಡಿ ಆತನ ಬೆರಳು ತಲೆ ಖಾಸಗಿ ಅಂಗಗಳು ಹಾಗೂ ಹೃದಯವನ್ನು ಕತ್ತರಿಸಿದ್ದಾನೆ.
ಇದಾದ ಬಳಿಕ ಆತನ ಹೃದಯದ ಫೋಟೋವನ್ನು ತನ್ನ ಪ್ರೇಯಸಿಗೆ ಕಳುಹಿಸಿದ್ದಾನೆ ಇದಕ್ಕೆ ಆಕೆ ವೆರಿ ಗುಡ್ ಎಂದು ಪ್ರತಿಕ್ರಿಯಿಸಿರುತ್ತಾಳೆ ಎಂದು ಹೇಳಲಾಗುತ್ತಿದೆ.
ನಂತರ ಆತನೇ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದು ಪೊಲೀಸರು ಹರಿಹರ ಕೃಷ್ಣನ ವಿರುದ್ಧ ಪ್ರಕರಣ ದಾಖಲಿಸಿದ್ದು ಆತನನ್ನು ಕೋರ್ಟಿಗೆ ಹಾಜರುಪಡಿಸಿರುತ್ತಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago