Corruption

“ಒಂದೇ ದಿನಕ್ಕೆ ಹೊಸ ರಸ್ತೆಯಲ್ಲಿ ಗುಂಡಿ! – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ”

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತೊಪ್ಪನಹಳ್ಳಿ ಗ್ರಾಮದಿಂದ ಚಾಮನಹಳ್ಳಿ ಗ್ರಾಮದತ್ತ ನಿರ್ಮಿಸಲಾದ ಹೊಸ ಡಾಂಬರ್ ರಸ್ತೆ ಕೇವಲ ಒಂದು ದಿನದಲ್ಲೇ ಹಾನಿಗೊಂಡಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದೇ ದಿನದಲ್ಲಿ ರಸ್ತೆಯಲ್ಲಿ ಗುಂಡಿ!

ಮಾರ್ಚ್ 15, 2025ರಂದು ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದರೆ 16, 2025ರಂದೇ ಹೊಸ ರಸ್ತೆ ನಜ್ಜುಗುಜ್ಜಾಗಿದ್ದು, ಕೆಲವು ಭಾಗಗಳಲ್ಲಿ ಡಾಂಬರ್ ಬೇರ್ಪಟ್ಟಿದೆ. ಹೀಗಾಗಿ ಸ್ಥಳೀಯರು ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಪ್ರತಿಕ್ರಿಯೆ

ಈ ಕುರಿತು ಕೋಲಾರ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಬಂಗಾರಪೇಟೆ ತಾಲೂಕು ಜೂನಿಯರ್ ಇಂಜಿನಿಯರ್ ಶ್ರೀನಿವಾಸ್ ಪ್ರತಿಕ್ರಿಯಿಸಿ, “ನಮಗೆ ಸರ್ಕಾರದಿಂದ ಅನುಮತಿ ಇರುವುದು 20 ಎಂಎಂ ರಸ್ತೆ ಮಾತ್ರ ಹಾಗಾಗಿ ವೊಂದು ಕಡೆ ಮಾತ್ರ ರಸ್ತೆ ಕಿತ್ತುಹೋಗಿರುವುದು ಗಮನಕ್ಕೆ ಬಂದಿದೆ, ಕೆಲವೊಮ್ಮೆ ಇಂತಹ ಘಟನೆ ನಡೆಯುವುದು ಸಹಜ ಕೂಡಲೇ ಸರಿಪಡಿಸಲು ಕಳುಹಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ಸಾರ್ವಜನಿಕರ ಆಕ್ರೋಶ

ಆದರೆ ಸ್ಥಳೀಯರ ಪ್ರಕಾರ, ಈ ಹೊಸ ರಸ್ತೆಯ ಹಲವು ಭಾಗಗಳಲ್ಲಿ ಬಿರುಕು, ಗುಂಡಿ ಕಾಣಿಸಿಕೊಂಡಿದೆ. ಗುಣಮಟ್ಟವಿಲ್ಲದ ಕಾಮಗಾರಿ, ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಸುತ್ತ ಒತ್ತಿಹೇಳಿದ ಅವರು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವರದಿ: ರೋಶನ್

ಭ್ರಷ್ಟರ ಬೇಟೆ

Recent Posts

ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು

ಪಟಿಯಾಲಾದಲ್ಲಿ ಹಿರಿಯ ಸೇನಾ ಅಧಿಕಾರಿ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಮಗ ಅಂಗದ್ ಸಿಂಗ್ ಮೇಲೆ ಮೂವರು ಪಂಜಾಬ್…

42 minutes ago

ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…!

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು…

45 minutes ago

ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲ ಪತ್ತೆ: ಕಾನ್ಸ್‌ಸ್ಟೇಬಲ್ ಸೇರಿ ನಾಲ್ವರು ಬಂಧನ

ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಪೊಲೀಸರು…

49 minutes ago

ಪಾಕ್ ಕ್ರಿಕೆಟಿಗ ರಜಾ ಹಸನ್ ಭಾರತ ಮೂಲದ ಪೂಜಾ ಬೊಮನ್ ಜೊತೆ ಎಂಗೇಜ್: ನ್ಯೂಯಾರ್ಕ್‌ನಲ್ಲಿ ಸೆಟಲ್

ಪಾಕಿಸ್ತಾನ ಕ್ರಿಕೆಟಿಗ ರಜಾ ಹಸನ್ ಭಾರತ ಮೂಲದ ಹಿಂದೂ ಯುವತಿ ಪೂಜಾ ಬೊಮನ್ ಜೊತೆ ನ್ಯೂಯಾರ್ಕ್‌ನಲ್ಲಿ ಸೆಟಲ್ ಆಗಿದ್ದು, ಇವರ…

51 minutes ago

ಕ್ರಿಸ್ ಗೇಲ್ ಹೆಸರು ದುರುಪಯೋಗಿಸಿ 2.8 ಕೋಟಿ ರೂ. ವಂಚನೆ: ಹೈದರಾಬಾದ್‌ನಲ್ಲಿ ಹೂಡಿಕೆ ಹಗರಣ

ಹೈದರಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಪಶ್ಚಿಮ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರನ್ನು ಬಳಸಿಕೊಂಡು 2.8 ಕೋಟಿ ರೂ. ವಂಚನೆ ನಡೆಸಿದ ಘಟನೆ…

55 minutes ago

ಹಫೀಜ್ ಸಯೀದ್ ಸಾವಿನ ವದಂತಿಗಳು: ಪಾಕಿಸ್ತಾನಿ ಪತ್ರಕರ್ತೆ ಮೋನಾ ಆಲಂ ಸ್ಪಷ್ಟನೆ

ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಕೊಲ್ಲಲ್ಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಪಾಕಿಸ್ತಾನಿ ಪತ್ರಕರ್ತೆ ಮೋನಾ ಆಲಂ…

57 minutes ago