Latest

ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು!

ಬಿ ಬಾಗೇವಾಡಿ: ಕೊಳಚೆ ನೀರಿನ ಕೆಸರು ಗದ್ದೆಯಾದ ಅಂಬಳನೂರ ಗ್ರಾಮದ ಬಸ್ ನಿಲ್ದಾಣ ಹಾಗೂ ಶ್ರೀ ಮಾರುತೇಶ್ವರ ದೇವಾಲಯದ ಆವರಣ. ಅಂಬಳನೂರ ಗ್ರಾಮದ ಪ್ರಮುಖ ಸ್ಥಳವಾದ ಬಸ್ ನಿಲ್ದಾಣ, ಹಾಗೂ ಪಕ್ಕದಲ್ಲಿರುವ ಮಾರುತೇಶ್ವರ ದೇವಾಲಯದ ಆವರಣ ಸಂಪೂರ್ಣ ಕೊಳಚೆ ನೀರಿನಿಂದ ಆವೃತಗೊಂಡೀದೆ. ಊರಿನ ಆರಾಧ್ಯ ದೇವ ಶ್ರೀ ಮಾರುತೇಶ್ವರ ದೇವಾಸ್ಥಾನಕ್ಕೆ ಪ್ರತಿದಿನ ಗ್ರಾಮದ ಭಕ್ತಾಧಿಗಳು ಹಾಗೂ ಸಾವ೯ಜನಿಕರು ದೇವಾಲಯದ ದಶ೯ನಕ್ಕೆ ಹೋಗಬೇಕಾದರೆ ಈ ಕೊಳಚೆ ನೀರು ಮತ್ತು ಕೆಸರಿನಲ್ಲಿಯೇ ತುಳಿದಾಡಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ, ಬೆಂಗಳೂರು, ವಿಜಯಪುರ, ಬಸವನ ಬಾಗೇವಾಡಿ ನಗರಗಳಿಗೆ ಸಂಪರ್ಕಿಸುವ ಸುತ್ತಮುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಳವಾಗಿದ್ದು ಇಲ್ಲಿನ ಬಸ್ ನಿಲ್ದಾಣಕ್ಕೆ ಬೇರೆ ಬೇರೆ ಗ್ರಾಮಗಳ ಜನರು ಬಂದು ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಮಾರುತೇಶ್ವರ ದೇವಾಲಯದ ಕಂಪೌಂಡ ಗೋಡೆಯ ಮೇಲೆ ತಮ್ಮ ಲಗೇಜುಗಳನ್ನು ಇಟ್ಟುಕೊಂಡು ಬಸ್ ಬರುವವರಿಗೂ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು, ಈಗ ಸುಮಾರು ತಿಂಗಳಿನಿಂದ ಈ ಸ್ಥಳದಲ್ಲಿ ಗ್ರಾಮದ ಕೆಲವು ಮನೆಗಳ ಬಟ್ಟೆ ತೊಳೆದ, ಸ್ನಾನ ಮಾಡಿದ ನೀರು ದಿನಂಪ್ರತಿ ಇಲ್ಲಿಯೇ ಬಂದು ಶೇಖರಣೆಗೊಂಡು, ಹೊಲಸು ವಾಸನೆ ಹಾಗೂ ಸೊಳ್ಳೆ, ಕ್ರಿಮಿಕೀಟಗಳ ತಾಣವಾಗಿ ಪ್ರಯಾಣಿಕರು ಹಾಗೂ ಗ್ರಾಮದ ಸಾವ೯ಜನಿಕರು ಕುಳಿತುಕೊಳ್ಳಲು, ಓಡಾಡಲು ಆಗದೆ ಹಿಡಿ ಶಾಪ ಹಾಕುತ್ತಿದರೆ.
ಊರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ, ಸಂಪೂರ್ಣ 2-3 ಅಡಿಯಷ್ಟು ಆಳವಾಗಿ ಕೊಳಚೆ ನೀರು ಮಲ ಮೂತ್ರ ಸೇರಿ ಸಂಪೂರ್ಣ ಪ್ರದೇಶ ಗಬ್ಬೆನ್ನುತಿದೆ, ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶಾಲೆಯಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ ಇದೆಲ್ಲದರ ಗೋಳು ಕೇಳುವವರು ಯಾರು ಇಲ್ಲದಂತಾಗಿದೆ. ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಭಿವೃದ್ಧಿಯ ಅಧಿಕಾರಿಗಳಿಗೆ ಹಲವಾರು ಬಾರಿ ಪೋನ ಮಾಡಿ ಹಾಗೂ ಅನೇಕ ಸಲ ಆಫೀಸಿಗೆ ಹೋಗಿ ವಿನಂತಿಸಿಕೊಂಡರು ಕ್ಯಾರೆ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಸಂಬಂಧಪಟ್ಟ ಮೇಲಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago