ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಗದ್ದೆಯಲ್ಲಿ ಬೋರ್ ವೆಲ್ ಪ್ರಾರಂಭ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮುಂಡಗೋಡದ ತಾಲೂಕ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟ ಘಟನೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಿನೇಂದ್ರ ಪಾರ್ಶ್ವನಾಥ ಬಸ್ತವಾಡ (18)ಎಂಬ ಯುವಕನೇ ದಾರುಣವಾಗಿ ಸಾವು ಕಂಡಿದ್ದಾನೆ.
ಇನ್ನೂ ಮೃತ ಯುವಕನ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ ಆತನ ಕುಟುಂಬದವರು ಶಿರಸಿಯ ನೇತ್ರ ಭಂಡಾರವನ್ನು ಸಂಪರ್ಕಿಸಿದ್ದಾರೆ ಆಗ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಶಿರಸಿಯ ಲಯನ್ಸ್ ನೇತ್ರ ಭಂಡಾರದವರು ಯುವಕನ ಎರಡು ಕಣ್ಣುಗಳನ್ನು ಸುರಕ್ಷಿತವಾಗಿ ಪಡೆದುಕೊಂಡು ಹೋಗಿದ್ದಾರೆ ಇದರಿಂದ ಯುವಕನು ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿದ್ದಾನೆ.
ಯುವಕನ ಕುಟುಂಬದವರ ಕಾರ್ಯಕ್ಕೆ ತಾಲೂಕಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.
ವರದಿ: ಮಂಜುನಾಥ ಹರಿಜನ.

error: Content is protected !!