ಸ್ನೇಹ ಹಾಗೂ ಲಾಸಿ ಎನ್ನುವ ಯುವತಿಯರಿಬ್ಬರು ದಾವಣಗೆರೆಯ ಪದವಿ ವ್ಯಾಸಾಂಗ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅತ್ಮೀಯವಾಗಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿದೆ. ಅದು ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ ಸಲಿಂಗಕಾಮಕ್ಕೆ ತಿರುಗಿದೆ. ಆದ್ರೆ, ಆ ಯುವತಿಯು ಪರ ಯುವತಿಯೊಂದಿಗೆ ಫೋನ್ನಲ್ಲಿ ಮಾತನಾಡಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸಲಿಂಗಕಾಮಿ ರೇಡಿಯಂ ಕಟರ್ನಿಂದ ಹಲ್ಲೆ ನಡೆಸಿದ್ದಾಳೆ. ಈ ಪ್ರಕರಣ ದಾವಣಗೆರೆ ನಗರದ ಶಾಂತಿ ನಗರದಲ್ಲಿ ನಡೆದಿದೆ.
ಕಡೂರು ಮೂಲದ ಲಾಸಿ ಎನ್ನುವ ಯುವತಿ ದಾವಣಗೆರೆಯ ಶಾಂತಿ ನಗರದ ಸ್ನೇಹ ಎನ್ನುವ ಯುವತಿಗೆ ರೇಡಿಯಂ ಕಟರ್ ನಿಂದ ಹಲ್ಲೆ ನಡೆಸಿ ತಾನು ಕೈ ಕೊಯ್ದುಕೊಂಡಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಾಸಿ ಹಾಗು ಸ್ನೇಹ ಇಬ್ಬರು ಯುವತಿಯರನ್ನು ನೋಡಿ ಕುಟುಂಬಸ್ಥರು ಒಂದು ಕ್ಷಣ ದಂಗ್ ಆಗಿ ಹೋಗಿದ್ದರು. ಬಳಿಕ ಇಬ್ಬರು ಯುವತಿಯರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಇಬ್ಬರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆಗೊಳಗಾದ ಯುವತಿ ಸ್ನೇಹ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮಾತನಾಡಿ ಆತ್ಮೀಯವಾಗಿದ್ದ ಒಂದೇ ಕಾರಣ ಲಾಸಿಗೆ ಸಿಟ್ಟು ಬಂದಿದೆ. ಯುವತಿ ಲಾಸಿ ನಿನ್ನೇ (ಅ.20) ಸ್ನೇಹ ಮನೆಗೆ ನುಗ್ಗಿ ರೇಡಿಯಂ ಕಟರ್ ನಿಂದ ಮನಬಂದಂತೆ ಕುತ್ತಿಗೆ, ಕೆನ್ನೆ, ಹಾಗೂ ಕೈಗೆ ಗಂಭೀರ ಗಾಯಗೊಳಿಸಿದ್ದಾಳೆ. ಬಳಿಕ ತಾನು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ಸಂಬಂಧ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ ನಡೆಸಿದ ಲಾಸಿ ವಿರುದ್ದ 307 ಕೇಸ್ ದಾಖಲಾಗಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…