Latest

ಪ್ರತೀ ರಾತ್ರಿ ಲವರ್ ಮೀಟ್ ಆಗೋಕೆ ಗ್ರಾಮದ ಟ್ರಾನ್ಸ್‌ಫಾರ್ಮರ್ ಫ್ಯೂಸ್ ತೆಗೆಯುತ್ತಿದ್ದ ಯುವತಿ!

ಬಿಹಾರದ ಬೆಟ್ಟಿಯಾ ಗ್ರಾಮದ ಯುವತಿ ಸಂಪೂರ್ಣ ಗ್ರಾಮದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಪ್ರಿಯಕರನನ್ನು ಭೇಟಿಯಾಗುತ್ತಿದ್ದಳೆ. ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸುತ್ತಿದ್ದ ಟ್ರಾನ್ಸ್‌ಫಾರ್ಮರ್‌ ಬಳಿ ಬಂದು ಪ್ರೇಮಿಯನ್ನು ಭೇಟಿ ಯಾಗಲು ಕಾಯುತ್ತಿದ್ದಳು. ಪ್ರಿಯಕರ ಬಂದು ಮೊದಲು ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಎಬಿ (ಏರ್ ಬ್ರೇಕ್ ಸ್ವಿಚ್) ಸ್ವಿಚ್ ಕೆಳಗೆ ಬೀಳಿಸುತ್ತಿದ್ದನು. ಇದರಿಂದಾಗಿ ಇಡೀ ಗ್ರಾಮದ ದೀಪಗಳು ಆಫ್ ಆಗುತ್ತಿದ್ದವು. ಆಗ ಇಬ್ಬರೂ ರಾತ್ರಿಯ ಕತ್ತಲಲ್ಲಿ ಭೇಟಿಯಾಗುತ್ತಿದ್ದರು. ನಂತರ ಪ್ರಿಯಕರ ಮರಳಿ ಹೋದ ನಂತರ ಯುವತಿ ಟ್ರಾನ್ಸ್‌ಫಾರ್ಮರ್ ಸ್ವಿಚ್ ಹಾಕುತ್ತಿದ್ದಳು.
ಗ್ರಾಮದಲ್ಲಿ ದಿನಾಲೂ ಕರೆಂಟ್ ಕಟ್ ಆಗುವ ಕಾರಣ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಜನರು ನಿಗಾ ವಹಿಸಿದ್ದರು. ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದರು. ಇದೇ ವೇಳೆ ಜುಲೈ 14ರಂದು ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಲವರ್ಸ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿಡಿಯೋದಲ್ಲಿ ಆರರಿಂದ ಏಳು ಮಂದಿ ಜೋಡಿಯನ್ನು ಸುತ್ತುವರಿದಿದ್ದಾರೆ. ಎಲ್ಲರೂ ಸೇರಿ ಹುಡುಗನಿಗೆ ಬೆಲ್ಟ್‌ನಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಯುವತಿ ತನ್ನ ಪ್ರಿಯಕರನನ್ನು ಥಳಿಸುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಜನರನ್ನು ಹೊಡೆದಿದ್ದಾಳೆ. ಥಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದೆ. ಇದರಲ್ಲಿ ಕೆಲವರು ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ನೌತಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ಯುವತಿಯ ಪ್ರೇಮಿ ಆಕೆಯ ಗ್ರಾಮಕ್ಕೆ ಬಂದು ಆಕೆಯನ್ನು ಥಳಿಸಿದವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು, ವೀಡಿಯೋ ಆಧರಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಪ್ರಿಯಕರ ಮತ್ತು ಗೆಳತಿಯ ಕುಟುಂಬಗಳ ನಡುವೆ ಸಮಸ್ಯೆ ಇತ್ಯರ್ಥವಾಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆ ಯಾಗಲಿದ್ದಾರೆ ಎಂದು ಗೆಳತಿ ಮತ್ತು ಗೆಳೆಯನ ಸಂಬಂಧಿಕರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ನೌತನ್ ಪೊಲೀಸ್ ಠಾಣೆಯ ಮುಖ್ಯಸ್ಥ ಖಾಲಿದ್ ಅಖ್ತರ್, ಈ ವಿಷಯವು ಪ್ರೇಮ ಸಂಬಂಧವಾಗಿದೆ. ಹೀಗಾಗಿ ಸೂಕ್ಷ್ಮವಾಗಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago