Categories: Latest

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; ಮಾನ್ವಿಯ 3 ಸೈಬರ್ ಕೇಂದ್ರ ಸೀಜ್!

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ 200 ರಿಂದ 250 ರೂಪಾಯಿವರೆಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಮಾನ್ವಿಯ ಮೂರು ಸೈಬರ್ ಕೇಂದ್ರಗಳನ್ನು ಸೀಜ್​ ಮಾಡಲಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಪಾಸ್‌ವಾರ್ಡ್ (ರಹಸ್ಯ ಸಂಖ್ಯೆ) ದುರ್ಬಳಕೆ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಡಲು ಮಹಿಳೆಯರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮೂರು ಕಂಪ್ಯೂಟರ್ ಸೆಂಟರ್ ಮೇಲೆ‌ ದಾಳಿ ಮಾಡಿದ ಅಧಿಕಾರಿಗಳು, ಅವುಗಳನ್ನು ಸೀಜ್ ಮಾಡಿರುವ ಘಟನೆ ಜಿಲ್ಲೆಯ ಮಾನವಿಯಲ್ಲಿ ನಡೆದಿದೆ.
ಪ್ರತಿ ತಿಂಗಳು 2000 ಸಾವಿರ ರೂಪಾಯಿ ಹಣವನ್ನು ಕುಟುಂಬದ ಮನೆ ಯಜಮಾನಿಯ ಖಾತೆಗೆ ಜಮಾ ಮಾಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್​ ಸರ್ಕಾರ ಈ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಹಣ ಪಡೆಯಲು ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಸರ್ಕಾರ ಇತ್ತೀಚೆಗಷ್ಟೇ ಹೇಳಿತ್ತು. ಆದರೆ, ಇದರ ಹೆಸರಿನಲ್ಲಿ ಮಾನವಿಯ ಗ್ರಾಮ ಒನ್‌ ಕೇಂದ್ರದ ಪಾಸ್‌ವರ್ಡ್ ಅನ್ನು ಖಾಸಗಿ ಅಂಗಡಿಯಲ್ಲಿ ದುರ್ಬಳಕೆ ಮಾಡಿಕೊ೦ಡು ಒಂದು ಅರ್ಜಿಗೆ 200 ರೂ. ವಸೂಲಿ ಮಾಡುತ್ತಿದ್ದರು ಎಂಬ ದೂರು ಕೇಳಿ ಬಂದಿತ್ತು. ಈ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಾನವಿಯ ತಹಶೀಲ್ದಾರ್ ಎಲ್ ಡಿ ಚಂದ್ರಕಾಂತ ಅವರು ತಮ್ಮ ಸಿಬ್ಬಂದಿಯೊಂದಿಗೆ ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ದಾಳಿ ಬಳಿಕ ಮಾಹಿತಿ ನೀಡಿದ ತಹಶೀಲ್ದಾರ್ ಚಂದ್ರಕಾಂತ್, ಸರ್ಕಾರದ ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಸದಾಪೂರು ಗ್ರಾಮದಲ್ಲಿ ಗ್ರಾಮ ಒನ್‌ ಕೇಂದ್ರ ಇದ್ದರೂ ಸಹ ಅದನ್ನು ಬಂದ್‌ ಮಾಡಿ ಮಾನವಿ ಲಕ್ಷ್ಮಿ ಕಂಪ್ಯೂಟರ್ ಕೇಂದ್ರದಲ್ಲಿ ಸರ್ಕಾರ ನೀಡಿದ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಫಲಾನುಭವಿ ಮಹಿಳೆಯಿಂದ ನೋಂದಣಿ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್​ನಲ್ಲಿ ಒಂದು ಅರ್ಜಿಗೆ 200 ರಿಂದ 250 ರೂಪಾಯಿವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ಕಂಪ್ಯೂಟರ್ ಸೆಂಟರ್ ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈ ಬಗ್ಗೆ ಯಾರಾದರು ಅಸಡ್ಡೆ ತೋರಿದರೆ ಅಥವಾ ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago