Latest

ಅಕ್ಷರ ದಾಸೋಹ ಅಕ್ಕಿ ಕದ್ದ ಸಿಬ್ಬಂದಿ!

ಅಕ್ಷರ ದಾಸೋಹದ ಅಕ್ಕಿ ಕದ್ದು, ಸಿಬ್ಬಂದಿ ನೇರವಾಗಿ ಸಿಕ್ಕಿಬಿದ್ದಿರು ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.
ವಡ್ಡಗೆರೆ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದಿ ದಿನಾಂಕ 22-9-2023 ರಂದು ಶಾಲೆಯ ಮಕ್ಕಳಿಗೆ ಬಂದಿರುವಂತಹ ಅಕ್ಕಿಯನ್ನು ತನ್ನ ಮಗನ ಸಹಾಯದೊಂದಿಗೆ ಕದ್ದು ಮನೆಗೆ ಸಾಗಿಸುವಂತಹ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ.
ಸಿಕ್ಕಿಬಿದ್ದ ಬಳಿಕ ಅಡುಗೆ ಸಿಬ್ಬಂದಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಮನೆಯಲ್ಲಿ ಅಕ್ಕಿ ಇಲ್ಲದ ಕಾರಣ ಇಂತ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಹೇಳಿಕೊಂಡಿರುತ್ತಾರೆ.
ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ನಂತರ ಗ್ರಾಮಸ್ಥರು ಪಟ್ಟು ಹಿಡಿದು ಇವರುಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿರುತ್ತಾರೆ. ಆತಂಕಕೀಡಾದ ಅಡುಗೆ ಸಿಬ್ಬಂದಿ ಸ್ಥಳದಲ್ಲೇ ಮೂರ್ಛೆ ಹೋಗಿದ್ದು ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಬಿಪಿ ವ್ಯತ್ಯಾಸ ಆಗಿರುವ ಕಾರಣ ಮೂರ್ಚೆ ಹೋಗಿದ್ದಾರೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಣೆ ನೀಡಿರುತ್ತಾರೆ.
ಶಾಲೆಯಲ್ಲಿ ಅಡುಗೆ ಕೆಲಸ ಮಾಡಲು ಇಬ್ಬರು ಸಿಬ್ಬಂದಿಗಳಿದ್ದು ಇಬ್ಬರು ಸೇರಿಕೊಂಡೆ ಇಂತಹ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಘಟನೆ ನಡೆದ ಬಳಿಕ ಗ್ರಾಮಸ್ಥರು ಇಬ್ಬರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತಾಯಿಸಿರುತ್ತಾರೆ. ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆ ಕಾದುನೋಡಬೇಕಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago