Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago