Latest

ಎಸ್ಪಿ ಸುಮನ್ ಪನ್ನೆಕರ್ ಸಿಐಡಿಗೆ ವರ್ಗಾವಣೆ,ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ ನೇಮಕ…!

ಕಾರವಾರ: ಕಳೆದ ಒಂದು ವರ್ಷದ ಹಿಂದೆಯಷ್ಟೇ ಉತ್ತರ ಕನ್ನಡ‌ ಜಿಲ್ಲೆಗೆ ಆಗಮಿಸಿ ತಮ್ಮ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸಗಳನ್ನು ಮಾಡುತ್ತಾ ಜಿಲ್ಲೆಯಲ್ಲಿನ ಮಟ್ಕಾದಂತಹ ಅದೆಷ್ಟೋ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದರು.ಹೀಗಾಗಿ ಇವರನ್ನು ಜಿಲ್ಲೆಯ ಜನರು ದಕ್ಷ ಎಸ್ಪಿ ಎಂದೆ ಕರೆಯುತ್ತಿದ್ದರು.ಯಾವಾಗ ಈ ಅಧಿಕಾರಿ ಭ್ರಷ್ಟರ ಮಾತುಗಳಿಗೆ ಬೆಲೆ ಕೊಡದೆ ಕೆಲಸ ಮಾಡಲು ಪ್ರಾರಂಭಿಸಿದರೋ ಅಂದಿನಿಂದಲೇ ಇವರ ವರ್ಗಾವಣೆಗೆ ಸ್ಕೆಚ್ಅನ್ನು ಹಾಕಿದ್ದರು ಎನ್ನಲಾಗಿದೆ.ಕಳೆದ ಎರಡು ತಿಂಗಳ ಹಿಂದೆಯೇ ಎಸ್ ಪಿ ಮೇಡಂ ಅವರ ವರ್ಗಾವಣೆಯ ಮಾತುಗಳು ಕೇಳಿ ಬಂದಿದ್ದವು ಆಗ ಜಿಲ್ಲೆಯ ಅದಷ್ಟೋ ಶುದ್ಧ ಮನಸ್ಸುಗಳು ಸಾಮಾಜಿಕ ಜಾಲತಾಣಗಳ ಮೂಲಕ ಎಸ್ ಪಿ ಮೇಡಂ ಅವರನ್ನು ವರ್ಗಾವಣೆ ಮಾಡದಂತೆ ಆಕ್ರೋಶವನ್ನೂ ಸಹ ಹೊರಹಾಕಿದ್ದವು.
ತಮ್ಮ ಇಲಾಖೆಯಲ್ಲಿಯೇ ಇರುವ ಕೆಲವು ಅಧಿಕಾರಿಗಳು ಇವರ ಕಾರ್ಯವೈಕರಿಯ ಬಗ್ಗೆ ಒಳಗೊಳಗೆ ಕೈ ಹಿಸುಕಿಕೊಳ್ಳುವಂತಾಗಿತ್ತು ಮತ್ತು ಅಕ್ರಮ ದಂದೇಕೋರರು ಈ ಅಧಿಕಾರಿ ಯಾವಾಗ ಹೋಗುತ್ತಾರೆಯೋ ಮಾರಾಯ ಎಂಬ ಮಾತುಗಳನ್ನು ಆಡುತ್ತಾ ಎಸ್ ಪಿ ಮೇಡಂ ಅವರ ದಕ್ಷತೆಗೆ ಬೆಚ್ಚಿಬಿದ್ದಿದ್ದರು.
ಅದೇನೆ ಇರಲಿ ಸರ್ಕಾರ ದಕ್ಷ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ಕೊಡುತ್ತಾ ಒಳ್ಳೆಯ ಆಡಳಿತವನ್ನು ನಡೆಸುವಲ್ಲಿ ಸಹಕಾರವನ್ನು ಕೊಡಬೇಕಿತ್ತು ಆದರೆ ರಾಜ್ಯದಲ್ಲಿಯೇ ಇವರೊಬ್ಬರ ವರ್ಗಾವಣೆ ಆದೇಶವನ್ನು ಮಾಡಿರುವುದು ದಕ್ಷ ಅಧಿಕಾರಿಗಳಿಗೆ ಬೆಲೆ ಇಲ್ಲ ಎನ್ನುವುದು ಸಾಬೀತಾಗಿದೆ.
ವರದಿ:ಮಂಜುನಾಥ ಹರಿಜನ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago