Latest

ಮಾದಕ ವಸ್ತು ಮತ್ತು ಚರಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಬಂಧನ..!

ಉತ್ತರ ಕನ್ನಡ:  ಜಿಲ್ಲೆಯ ಭಟ್ಕಳ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಬೀಚ್ ರಸ್ತೆಯಲ್ಲಿ ಪ್ರವಾಸಿಗರಿಗೆ ಮಾದಕ ವಸ್ತು ಹಾಗೂ ಚರಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಬಂಧಿತರಿಂದ 10 ಲಕ್ಷ ರೂಪಾಯಿ ಮೌಲ್ಯದ ಒಂದೂವರೆ ಕೆಜಿಗೂ ಅಧಿಕ ಮೌಲ್ಯದ ಚರಸ್ ಅನ್ನು ಹಾಗೂ ಒಂದು ದ್ವಿಚಕ್ರ ವಾಹನ ಮತ್ತು 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗೋಕರ್ಣದ ಬೇಲಿ ಹಿತ್ತಲು ನಿವಾಸಿ ತುಳಸು ಹಮ್ಮು ಗೌಡ, ಮೂಲೆಕೇರಿ ನಿವಾಸಿ ಶ್ರೀಧರ್ ಗೌಡ ಹಾಗೂ ಕೂಡ್ಲ ನಿವಾಸಿ ಸಂತ ಬಹದ್ದೂರ್ ತಮಂಗ್ ಅವರೇ ಬಂಧಿತ ಆರೋಪಿಗಳಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ ಟಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಡಿವೈಎಸ್ಪಿ ಶ್ರೀಕಾಂತ್, ಗೋಕರ್ಣ ನಿರೀಕ್ಷಕ ಮಂಜುನಾಥ ಎಮ್, ಉಪನಿರೀಕ್ಷಕ ಹರೀಶ್ ಹೆಚ್‌ ವಿ, ಪಿಎಸ್ಐ ಸಕ್ತಿವೇಲು, ಎಎಸ್ಐ ಅರವಿಂದ ಶೇಟ್ ಹಾಗೂ ಸಿಬ್ಬಂದಿಗಳಾದ ವಸಂತ ನಾಯ್ಕ, ರಾಜೇಶ್ ನಾಯ್ಕ, ಸಚಿನ್ ನಾಯ್ಕ್, ನಾಗರಾಜ ನಾಯ್ಕ, ಜಿ ಬಿ ರಾಣೆ, ಕಿರಣ್ ಕುಮಾರ್, ಗಣೇಶ್ ದಾಸರ್ ಅವರು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ :ಮಂಜುನಾಥ ಹರಿಜನ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago