ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…