Latest

ಬಂಗಾರಪೇಟೆ ತಾಲೂಕಿನ ಎನ್. ಗಾಯತ್ರಿ ರವರು 25ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ.

ಕರ್ನಾಟಕಕ್ಕೆ 4ನೇ ಶ್ರೇಣಿ ಪಡೆದು ಎನ್ .ಗಾಯತ್ರಿ ರವರು  ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ತಳವರ್ಗ ಕಡು ಬಡತನದ ಹಿನ್ನಲೆಯಿಂದ ಬಂದ ಎನ್. ಗಾಯತ್ರಿ ರವರು ಆಯ್ಕೆಯಾಗಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾರಹಳ್ಳಿ ಗ್ರಾಮದ ಎನ್. ಗಾಯತ್ರಿ ರವರು 2021ರಲ್ಲಿ ತಮ್ಮ ಕಾನೂನು ಪದವಿ ಪಡೆದು ತಾವು ಕಂಡ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ತಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಎನ್. ಗಾಯತ್ರಿ ರವರು ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು ನಂತರ ಕೆ.ಜಿ.ಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.
ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಏಕೈಕ ಪುತ್ರಿ ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ ಕಾಳಜಿ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು. ಇದೀಗ ಯಶಸ್ವಿಯಾಗಿದ್ದು, ತಂದೆ, ತಾಯಿ, ಸಹಪಾಠಿಗಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರು, “ಎರಡನೇ ಪ್ರಯತ್ನದಲ್ಲಿ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ನನಗಿಂತ ನಮ್ಮ ಕುಟುಂಬಸ್ಥರು ಹೆಚ್ಚು ಖುಷಿಯಾಗಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸ್ಫೂರ್ತಿ.

“ನಮ್ಮಮನೆಯಲ್ಲಿ ಉನ್ನತ ಶಿಕ್ಷಣ ಪಡೆದ ಮೊದಲ ಮಹಿಳೆ ನಾನು, ಸರ್ಕಾರಿ ನೌಕರಿ ಪಡೆದುಕೊಂಡದ್ದು, ಅದರಲ್ಲೂ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದರಲ್ಲಿ ಮೊದಲಿಗಳು. ತಳ ಸಮುದಾಯಗಳ ತಲ್ಲಣಗಳಿಗೆ ಮಿಡಿಯಲು ಪ್ರಯತ್ನಿಸುತ್ತೇನೆ. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಮಿತಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನೆಲ್ಲ ಸಾಧನೆಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸ್ಫೂರ್ತಿಯಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವೆ” ಎಂದು ಹೇಳಿದರು.
ವರದಿ – ರೋಶನ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago