ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ಇನ್ಶೂರೆನ್ಸ್ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ಇನ್ಶೂರೆನ್ಸ್ ಮಾಡಿಸುವ ಬಹಳಷ್ಟು ವಾಹನ ಮಾಲೀಕರು ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ಅಪಘಾತಗಳು ನಡೆದ ಸಂದರ್ಭದಲ್ಲಿ ಅಂತಹ ವಾಹನಗಳ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ. ಅಷ್ಟಾದರೂ ಕೂಡಾ ಇನ್ಶೂರೆನ್ಸ್ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ.
ಯಾವ ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಇನ್ಶೂರೆನ್ಸ್ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ಇನ್ಶೂರೆನ್ಸ್ ರಿನಿವಲ್ ಮಾಡದ ಮಾಲೀಕರಿಗೆ ದಂಡ ವಿಧಿಸುವ ಸಾಧ್ಯತೆಯೂ ಇದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…