Latest

ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ

ಕಲಬುರಗಿ:  ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಅದನ್ನು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳೊಂದಿಗೆ ಎಫ್.ಆರ್.ಪಿ. ದರದನ್ವಯ ಮಾರಾಟ ಮಾಡಲು ಮತ್ತು ಸಕ್ಕರೆ ಆಯುಕ್ತರ ಆದೇಶದಂತೆ ಪ್ರತಿ ಕಿ.ಮೀ. ಅನ್ವಯ ಸಾರಿಗೆ ಮತು ಕಟಾವಿನ ವೆಚ್ಚ ಕಡಿತದೊಂದಿಗೆ ಹಣ ಪಾವತಿಸುವ ಷರತ್ತಿಗೊಳಪಟ್ಟು ದ್ವಿಪಕ್ಷೀಯ ಒಪ್ಪಂದ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೆ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುವುದು ಎಂದರು ಒಪ್ಪಂದಕ್ಕೆ ಸಹಿ ಹಾಕಲು ರೈತರಲ್ಲಿ ಮನವಿ ಮಾಡಿದ್ದರು.
ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಒಮ್ಮೆಲೆ ತಿಲಾಂಜಲಿ ನೀಡಲು ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಇಂದು ನಡೆಸಿದ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆ ಫಲಪ್ರಧವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಕಂಪನಿಗಳಲ್ಲಿ ಲಂಚಾವತಾರಕ್ಕೆ ಬ್ರೇಕ್ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಯಶವಂತ ವಿ. ಗುರುಕರ್ ವಿವರಿಸಿದರು.

ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ. ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದರು.
ವರದಿ: ನಾಗರಾಜ್ ಗೊಬ್ಬುರ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago