ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಡಿಸಿಆರ್ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫೋನ್ ಪೇ ಮೂಲಕ ಹಣ ಪಡೆಯುವಾಗಲೇ ಅಧಿಕಾರಿಗಳು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಾವ ಪ್ರಕರಣ?
ಸ್ಲಂ ಬೋರ್ಡ್ನಿಂದ ಮನೆ ಪಡೆಯಲು ಅಗತ್ಯವಿರುವ ಜಾತಿ ಪ್ರಮಾಣಪತ್ರಕ್ಕಾಗಿ ಲೋಕೇಶ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ದಾಖಲೆ ನೀಡುವ ಪ್ರತಿಯಾಗಿ ಇನ್ಸ್ಪೆಕ್ಟರ್ ಗೀತಾ 25,000 ರೂ. ಲಂಚದ ಬೇಡಿಕೆ ಇಟ್ಟಿದ್ದರು.
ಫೋನ್ ಪೇ ಮೂಲಕ ಮುಂಗಡ ಲಂಚ
ಲೋಕೇಶ್ ಅವರಿಂದ ಮುಂಗಡವಾಗಿ ₹10,000 ಲಂಚವನ್ನು ಫೋನ್ ಪೇ ಮೂಲಕ ಸ್ವೀಕರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತು. ಲಂಚದ ಬಗ್ಗೆ ಅನುಮಾನಗೊಂಡ ಲೋಕೇಶ್ ಕೂಡಲೇ ಲೋಕಾಯುಕ್ತಕ್ಕೆ ದೂರು ನೀಡಿದರು.
ಲೋಕಾಯುಕ್ತ ದಾಳಿ ಮತ್ತು ಬಂಧನ
ಲೋಕೇಶ್ ನೀಡಿದ ಮಾಹಿತಿಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಚಲನವಲನಗಳನ್ನು ಗಮನಿಸಿ, ಸೂಕ್ತ ಪ್ಲಾನ್ ಹಾಕಿ ದಾಳಿ ನಡೆಸಿದರು. ಫೋನ್ ಪೇ ಮೂಲಕ ಹಣ ವರ್ಗಾವಣೆ ಆಗುತ್ತಿದ್ದ ಸಂದರ್ಭದಲ್ಲಿಯೇ ಅಧಿಕಾರಿಗಳು ಗೀತಾ ಅವರನ್ನು ಬಂಧಿಸಿದರು.
ಈ ಪ್ರಕರಣದ ಕುರಿತು ಮುಂದಿನ ತನಿಖೆ ಸಾಗುತ್ತಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ಲಂಚ ಸ್ವೀಕರಿಸುವ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮಹದೇವ್ ಅವರು ಕನ್ನಡ ಮಾತನಾಡಿದಕ್ಕಾಗಿ ಮರಾಠಿ ಗುಂಪಿನಿಂದ ಹಲ್ಲೆಗೊಳಗಾದ ಘಟನೆಗೆ ರಾಜ್ಯದಾದ್ಯಂತ ಕನ್ನಡಿಗರು ಭಾರಿ ಆಕ್ರೋಶ…
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಅತ್ತೆ-ಸೊಸೆ ನಡುವಿನ ವೈಮನಸ್ಸು ಉಲ್ಬಣಗೊಂಡು ಕೋರ್ಟ್ ಆವರಣದಲ್ಲಿ ಹೊಡೆದಾಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ…
ಬೆಳಗಾವಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಮೇಲೆ ಮರಾಠಿ ಗೂಂಡಾಗಿರಿ ನಡೆದ ಘಟನೆ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ…
ರಾಜಸ್ಥಾನದ ಬೇವಾರ ಜಿಲ್ಲೆಯ ವಿಜಯನಗರದಲ್ಲಿ, ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್, ಲೈಂಗಿಕ ದೌರ್ಜನ್ಯ ಮತ್ತು ಬಲವಂತ ಮತಾಂತರ ಪ್ರಕರಣಗಳು ಬೆಳಕಿಗೆ ಬಂದಿದ್ದು,…
ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಮಹತ್ವದ ಪಂದ್ಯದಲ್ಲಿ ದೀರ್ಘಕಾಲದ ಕ್ರಿಕೆಟ್ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ.…
ನಗರದಲ್ಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ನಾಲ್ಕು ಮಕ್ಕಳ ತಾಯಿಯೊಬ್ಬರ ಮೇಲೆ ದೆಹಲಿ ಮೂಲದ ಮಹಿಳೆಯೊಂದಿಗೆ ನಾಲ್ವರು ವ್ಯಕ್ತಿಗಳು ಪೈಶಾಚಿಕ ಕೃತ್ಯ…