Latest

ಬಸ್ ಹತ್ತುವ ವಿಚಾರಕ್ಕೆ ಗಲಾಟೆ: ಗದಗ ಜಿಲ್ಲೆಯ ಮುಂಡರಗಿಯಲ್ಲಿ ಕಂಡಕ್ಟರ್ ಮೇಲೆ ಮೂವರಿಂದ ಹಲ್ಲೆ!

ಗದಗ ಜಿಲ್ಲೆ ಮುಂಡರಗಿಯಲ್ಲಿ ಬಸ್ ಹತ್ತುವ ಕುರಿತಂತೆ ನಡೆದ ಮಾತಿನ ಚಕಮಕಿ ಮಾರಾಮಾರಿಗೆ ಕಾರಣವಾಗಿ, ಮೂವರು ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಮುಂಡರಗಿ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಮುಂಡರಗಿಯಿಂದ ಹಿರೇವಡ್ಡಟ್ಟಿಗೆ ತೆರಳಬೇಕಿದ್ದ ಬಸ್ ನಲ್ಲಿ, ಪ್ರಯಾಣಿಕರಿಬ್ಬರು ಬಸ್ ಹತ್ತುವ ಸಂದರ್ಭದಲ್ಲಿ ಎದುರಾದ ಜಗಳವು ತೀವ್ರ ಸ್ವರೂಪ ಪಡೆದಿತು.

ಬಸ್ ಕಂಡಕ್ಟರ್ ಶರಣಪ್ಪ ಬಿದರಹಳ್ಳಿ ಅವರು, “ಮುಂದಕ್ಕೆ ಬನ್ನಿ” ಎಂದು ಸೂಚನೆ ನೀಡಿದ ವೇಳೆ, ಆಕ್ಷೇಪ ವ್ಯಕ್ತಪಡಿಸಿದ ಮೂವರು ವ್ಯಕ್ತಿಗಳು ಗಲಾಟೆ ಆರಂಭಿಸಿದರು. ಮಾತಿನ ಏರುಪೇರಾದ ಬಳಿಕ, ಅವರು ಥಳಿಸಿ ಕೈ ಹಾಗೂ ಕಾಲಿಗೆ ಗಂಭೀರ ಗಾಯಗೊಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಶರಣಪ್ಪ ಅವರನ್ನು ತಕ್ಷಣವೇ ಮುಂಡರಗಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

 

nazeer ahamad

Recent Posts

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಸರ್ಕಾರದ ತ್ವರಿತ ಕ್ರಮ, ಅಧಿಕಾರಿ ಅಮಾನತು..

ಶಿವಮೊಗ್ಗ: ರಾಜ್ಯದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಘಟನೆ ತೀವ್ರ ವಾಗ್ದಾಳಿ ಮತ್ತು ವಿರೋಧಕ್ಕೆ ಕಾರಣವಾಗಿದೆ. ಸಮಾಜದ…

7 hours ago

ಪಡುಬಿದ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪರಾರಿಯಾದ ಚಾಲಕ, ಟಿಪ್ಪರ್ ವಶಕ್ಕೆ

ಪಡುಬಿದ್ರಿ: ಹೆಜಮಾಡಿ ಮಟ್ಟು ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಪಡುಬಿದ್ರಿ ಪೊಲೀಸರು ಎಪ್ರಿಲ್ 17ರ ಮಧ್ಯರಾತ್ರಿ ವಶಪಡಿಸಿಕೊಂಡಿದ್ದಾರೆ. ತುರ್ತು…

8 hours ago

ಗುರುಗ್ರಾಮ್ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಟೆಕ್ನಿಷಿಯನ್ ದೀಪಕ್ ಬಂಧನ”

ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಗೆ ಸೇರಿದ್ದ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಾಲ್ಕು ದಿನಗಳ ನಿರಂತರ ತನಿಖೆಯ ಬಳಿಕ ಪೊಲೀಸರ…

9 hours ago

ಆರ್ಥಿಕ ವಂಚನೆ ಹಾಗೂ ಮಾನಸಿಕ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಆರೋಪಿಗಳ ವಿರುದ್ಧ ಉಲ್ಕೊಂಡ ವೀಡಿಯೋ ವೈರಲ್.!

ಬೆಂಗಳೂರು: ಅನೇಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆರ್ಥಿಕ ವಂಚನೆ ಮತ್ತು ಮಾನಸಿಕ ಕಿರುಕುಳದಿಂದ ತತ್ತರಿಸಿ ಜೀವನದ ಕ್ಷಣಿಕ ನಿರ್ಣಯ ಮಾಡಿಕೊಂಡ ದುರ್ಘಟನೆ…

10 hours ago

ಸಾಲದಲ್ಲಿ ಖರೀದಿಸಿದ ವ್ಯಾಪಾರ ವಾಹನಕ್ಕೆ ಬೆಂಕಿ: ಕೆಂಬಾರೆ ಗ್ರಾಮದ ದಂಪತಿಗೆ ಲಕ್ಷಾಂತರ ನಷ್ಟ.

ಬೆಳ್ಳೂರು ತಾಲ್ಲೂಕಿನ ಕೆಂಬಾರೆ ಗ್ರಾಮದಲ್ಲಿ ನಡೆದ ಒಂದು ದುರ್ಭಾಗ್ಯಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬಿಟ್ಟಿದೆ. ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಮಾರಾಟ ಮಾಡಿ…

11 hours ago

ರಿಷಿಕೇಶ ದುರಂತ: ರಿವರ್‌ ರಾಫ್ಟಿಂಗ್ ವೇಳೆ ನೀರಿಗೆ ಬಿದ್ದು ಯುವಕನ ಸಾವು

ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ರಿಷಿಕೇಶದಲ್ಲಿ ನಡೆಯುತ್ತಿದ್ದ ರಿವರ್‌ ರಾಫ್ಟಿಂಗ್‌ನಾಗಮನ ಒಂದು ದುರಂತದಲ್ಲಿ ಅಂತ್ಯ ಕಂಡಿದೆ. ಡೆಹ್ರಾಡೂನ್‌ನಿಂದ ಪ್ರವಾಸಕ್ಕೆ ಬಂದಿದ್ದ…

11 hours ago