Latest

ನನ್ನನ್ನೂ ಶಾಲೆಗೆ ಕರೆಯುವುದರಿಂದ ತಪ್ಪು ತಿದ್ದಿಕೊಂಡು ಸರ್ಕಾರಿ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಒಂದು  ಒಳ್ಳೆಯ ಅವಕಾಶ ಎಂದ. – ಶಾಸಕ ಡಾ.‌ ಶ್ರೀನಿವಾಸ್. ಎನ್. ಟಿ.‌

ಕೂಡ್ಲಿಗಿ ತಾಲೂಕಿನ  ಹುರುಳಿಹಾಳ್ ಗ್ರಾಮದಲ್ಲಿ ದಿ. 24-2-24 ರಂದು  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿರುವ ” 75 ನೇ ವರ್ಷದ ಅಮೃತ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ” ವನ್ನು ಮಾನ್ಯಶಾಸಕರು  ಉದ್ಘಾಟಿಸಿ ಮಾತನಾಡಿದರು. ‌ಸರ್ಕಾರಿ ಶಾಲೆಗಳಿಗೆ ನನ್ನನ್ನೂ ಮತ್ತೇ ಮತ್ತೇ  ಕರೆಯುವುದರಿಂದ ತಪ್ಪು ಮಾಡುವುದನ್ನು ತಿದ್ದಿಕೊಂಡು ದೇಶದ ಆಸ್ತಿಯಾದ  ಸರ್ಕಾರಿ ಸಂಸ್ಥೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಒಂದು ಒಳ್ಳೆಯ  ಅವಕಾಶ ಸಿಕ್ಕಿದೆ ಎಂದೂ ಹೇಳಿಕೊಳ್ಳಲು ಸಂತೋಷ ಅನಿಸುತ್ತದೆ.  ಹುರುಳಿಹಾಳ್ ಗ್ರಾಮ ಸರ್ವ ಜನಾಂಗದ ಶಾಂತಿಯ ತೋಟವಾಗಿ ಗಮನ ಸೆಳೆಯುತ್ತದೆ. ಇದೇ ಗ್ರಾಮದಲ್ಲಿ  ನಮ್ಮ ತಂದೆಯವರು ಸ್ಥಾಪಿಸಿದ  ಶಾಲೆ ಇದೆ ಅನ್ನುವುದು ಹೆಮ್ಮೆಯ ಸಂಗತಿ .‌ ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಅಭಿವೃದ್ಧಿಗೆ  ಒತ್ತುಕೊಡುವುದಾಗಿ  ತಿಳಿಸಿದರು. ಬಳಿಕ, ಹೊಸದಾಗಿ ನಿರ್ಮಾಣಗೊಂಡಿರುವ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು.‌ ಹಾಗೆಯೇ ಸಿ. ಆರ್. ಸಿ. ಕಛೇರಿಯನ್ನು  ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿ , ವಿದ್ಯಾರ್ಥಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ : ವಿನಾಯಕ್ ಕೆಎಸ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago