Crime

ರೌಡಿಗಳ ರೀಲ್ಸ್‌ ಗೆ ಬ್ರೇಕ್ ಹಾಕಲು ಮುಂದಾದ ಸಿಸಿಬಿ.

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್‌ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್‌ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ‌ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್‌ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು.
ಕೆಲ ರೌಡಿಗಳ ಶಿಷ್ಯಂದಿರು ಬಾಸ್‌ ಎಂದು ರೀಲ್ಸ್‌ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್‌ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್‌ ಅಕೌಂಟ್‌ಗಳನ್ನು ಬಂದ್ ಮಾಡಲಾಗಿದೆ. ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್‌ನ ಕಾರ್ಯಾಚರಣೆ ಇದು.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago