Latest

ಪುರುಷರ ಬಟ್ಟೆ ಧರಿಸಿದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಗೊಂದಲಕ್ಕೀಡಾದ ಕಂಡಕ್ಟರ್!

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್​​ ಕಾರ್ಡ್​​​ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್‌ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್‌ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್​​, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್‌ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago