ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯಾಯಾಲಯದ ಹೆಚ್ಚುವರಿ ಸಹಾಯಕ ಸಾರ್ವಜನಿಕ ಅಭಿಯೋಜಕ (ಎಪಿಪಿ) ಪ್ರಕಾಶ್ ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸೀಜ್ ಮಾಡಲಾಗಿದ್ದ ಮುದ್ದೆ ಮಾಲವನ್ನು ಬಿಡುಗಡೆ ಮಾಡಿಸಲೆಂದು ₹6,000 ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.
ಶಿರಸಿ ನಿವಾಸಿ ಪವನ್ ಕುಮಾರ್ ತಮ್ಮ ಸೀಜ್ ಆಗಿದ್ದ ವಸ್ತುಗಳನ್ನು ಬಿಡುಗಡೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಪ್ರಕಾಶ್ ಲಮಾಣಿ prakash Lamani ಅವರು ಪರವಾನಗಿಯನ್ನು ಸುಲಭವಾಗಿ ಒದಗಿಸಿಕೊಡಬಹುದು ಎಂದು ಭರವಸೆ ನೀಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬಗ್ಗೆ ಪವನ್ ಕುಮಾರ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ದೂರು ಆಧಾರದ ಮೇಲೆ, ಫೆಬ್ರವರಿ 28 ರಂದು ವಿಶೇಷ ಕಾರ್ಯಾಚರಣೆ ರೂಪಿಸಲಾಯಿತು. ಪವನ್ ಕುಮಾರ್ ಅವರು ಲಂಚದ ಹಣ ನೀಡುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಅವರ ತಂಡ ದಾಳಿ ನಡೆಸಿ ಪ್ರಕಾಶ್ ಲಮಾಣಿ ಅವರನ್ನು ಬಂಧಿಸಿದರು.
ಬಂಧನದ ನಂತರ ಲಮಾಣಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ಮುಂದುವರಿಸಲಾಗುತ್ತಿದೆ. ಜನಸಾಮಾನ್ಯರು ಈ ರೀತಿಯ ಅಕ್ರಮಗಳ ವಿರುದ್ಧ ಜಾಗೃತರಾಗಬೇಕು ಮತ್ತು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು.
ಕುಂದಗೋಳ: ಸಾಲಗಾರರ ಕಾಟದಿಂದ ಬೇಸತ್ತು ಯುವಕನೊಬ್ಬ ಮನನೊಂದು ಕಳೆನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಗೋಳ ಗ್ರಾಮೀಣ ಪೋಲಿಸ್ ಠಾಣೆಯ…
ಕುಮಟಾ ತಾಲೂಕಿನ ಗುಡೇಅಂಗಡಿಯ ನಿವಾಸಿ ಸುಮಾ ಮಡಿವಾಳ (32) ಅವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಮಟಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.…
ಬಾಗಲಕೋಟೆ ಜಿಲ್ಲೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ಪಿಯುಸಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮುಧೋಳ ಪಟ್ಟಣದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಎಟಿಎಂ ದರೋಡೆ ಪ್ರಕರಣದಿಂದ ಭಾರೀ ಚರ್ಚೆ ಮೂಡಿಸಿದೆ. ಕೇವಲ ಆರು ನಿಮಿಷಗಳೊಳಗೆ,…
ಬೆಳಗಾವಿಯಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯ ವಿವಾಹಕ್ಕೆ ಸ್ವತಃ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರೇ ಕೈಜೋಡಿಸಿರುವ ಮಾಹಿತಿಯಾಗಿದೆ. ಬೆಳಗಾವಿ…
ಬೆಂಗಳೂರು: ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಹಾಗೂ ಕಾನ್ಸ್ಟೆಬಲ್ ಒಬ್ಬರನ್ನು ಅಮಾನತು…