ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆ ಮಾಡಲು ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಲಂಚ ಕೇಳಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಗೋಪಿನಾಥ್‌ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗದ ಬುಕ್ಲಾಪುರದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಸ್ಮಶಾನವೊಂದರಲ್ಲಿ ಕಾಮಗಾರಿ ನಡೆಸಿದ್ದ ಓರ್ವ ಗುತ್ತಿಗೆದಾರನಿಗೆ ಬಿಲ್‌ ಪಾವತಿ ಮಾಡಲು 15 ಸಾವಿರ ಬೇಡಿಕೆ ಇಟ್ಟಿದ್ದರು. ದೂರುದಾರನಿಂದ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

error: Content is protected !!