Latest

ಅವ್ಯವಸ್ಥೆಗಿಡಾದ ದಲಿತ ಕಾಲೋನಿ; ನಿದ್ರೆಗೆ ಜಾರಿದನಾ ಪಿಡಿಓ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಯನೆಗಲಿ ಗ್ರಾಮದ ದಲಿತ ಕಾಲೋನಿಯ ದುಸ್ಥಿತಿ ಇದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಕೊಳಚೆ ನೀರೆಲ್ಲ ರಸ್ತೆಗೆ ಬಂದು ನಿಂತು ರಸ್ತೆಯೆಲ್ಲ ಕೊಳಚೆಯಿಂದ ಆವೃತಿಯಾಗಿದೆ.
ದಿನನಿತ್ಯ ಓಡಾಡಲು ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಬರೋದು ಹೋಗೋದು ಬಿಟ್ಟರೆ ಕೆಲಸ ಮಾತ್ರ ಶೂನ್ಯವಾಗಿದೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ದಲಿತ ಕಾಲೋನಿಯತ್ತ ಸಹ ಮುಖ ಮಾಡಿರುವುದಿಲ್ಲ. ಇವನೇ ಬೇರೆ ಇವನ ಕೆಲಸನೇ ಬೇರೆ ಎನ್ನುವಂತಾಗಿದೆ.
ಪಿಡಿಓ ಗೆ ಸರ್ಕಾರದ ಸಂಬಳ ಬಂದರೆ ಸಾಕು, ಊರೇ ಹಾಳಾಗಿ ಹೋಗಿ ಯಾವುದೇ ರೋಗ ಬಂದರು ಸರಿ ಅವರುಗಳಿಗೇನು ಚಿಂತೆಯಿಲ್ಲ, ಅವ್ಯವಸ್ಥೆಯನ್ನು ಯಾರು ಪ್ರಶ್ನಿಸಿದ ಕಾರಣ ನಿರ್ಲಕ್ಷ್ಯ ತೋರುವ ನಾಲಾಯಕ್ ಪಿಡಿಓ ಮುತ್ತಣ್ಣ ಡೋಣಿಗೆ ಲಂಗು ಇಲ್ಲ ಲಗಾಮು ಇಲ್ಲದಂತಾಗಿದೆ.
ಸ್ವಚ್ಛತೆ ಇಲ್ಲದೆ ದಲಿತ ಕಾಲೋನಿ ಜನರಿಗೆ ಡೆಂಗ್ಯೂ,ಮಲೇರಿಯಾ, ಕಾಲರಾ ನಂತಹ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದೆ. ಅಲ್ಲಿ ವಾಸವಿರುವ ಸ್ಥಳೀಯರು ಗ್ರಾಮ ಪಂಚಾಯತಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿನ ಗ್ರಾಮ ಪಂಚಾಯತಿ ಪಿಡಿಓ ಏನು ಕೆಲಸ ಮಾಡ್ತಾ ಇದ್ದಾರೆ ಎಂಬುದೇ ತಿಳಿಯದಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸದ ಪಿಡಿಓ ಇನ್ನು ಅಭಿವೃದ್ದಿ ಏನು ಮಾಡುತ್ತಾನೆ ಎಂಬುದು ಪ್ರಶ್ನೆಯಾಗಿದೆ?

ವರದಿ:ಸಂಗಪ್ಪ ಚಲವಾದಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago