Latest

ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೃತಪಟ್ಟಿವೆ. ಹಾಗೂ ಇನ್ನೂ 02 ಮೇಕೆಗಳು ಅಸ್ವಸ್ಥವಾಗಿವೆ. ಇದಕ್ಕೆ ಕಾರಣ ಸಮೀಪದಲ್ಲಿರುವ ಈ.ಐ.ಡಿ ಪ್ಯಾರಿ ಇಂಡಿಯಾ ಶುಗರ್ ಫ್ಯಾಕ್ಟರಿಯ ಕೊಳಚೆ ಹಾಗೂ ವಿಷಪೂರಿತ ನೀರು ಕುಡಿದು ಮೇಕೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೇ ಈ ಶುಗರ್ ಫ್ಯಾಕ್ಟರಿಯವರು ವಿಷಪೂರಿತ ನೀರನ್ನು ಹಳ್ಳ, ಕೆರೆ, ಹಾಗೂ ಕಾಲುವೆಗಳಿಗೆ ಬಿಡುತ್ತಿರುವುದರಿಂದ ಪ್ರಾಣಿಗಳು ಆ ನೀರನ್ನು ಕುಡಿದು ಸಾವನ್ನಪ್ಪುತ್ತೀವೆ. ಈ ವಿಷಯವಾಗಿ ಶುಗರ್ ಫ್ಯಾಕ್ಟರಿಯ ಹಿರಿಯ ಅಧಿಕಾರಿಯಾದ ಜೈರಾಮ್ ಎಂಬವನಿಗೆ ಕರೆ ಮಾಡಿ ತಿಳಿಸಿದರೆ ನನಗೆ ಅದಕ್ಕೆ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾನೆ. ಈ ರೀತಿ ಪ್ರಾಣಿಗಳಿಗೆ ಹಾನಿಯಾದರೆ ಅವುಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಬಹಳ ಕಷ್ಟವಾಗುತ್ತದೆ. ಪ್ರಾಣಿಗಳ ಮೇಲೆಯೇ ಅವಲಂಬಿತವಾಗಿರುವ ಪರಸಪ್ಪ ಗಂಗೂರ ಇವರಿಗೆ ತುಂಬಲಾರದ ನಷ್ಟವಾಗಿದೆ. ಸ್ಥಳಕ್ಕೆ ಆಗಮಿಸಿದ ಎ.ಎಸ್.ಐ ಬಸವರಾಜ ಜಮದಾರ್ ಖಾನಿ ಪರಿಶೀಲನೆ ನಡೆಸಿದ್ದಾರೆ.

ಆದ್ದರಿಂದ ಈ.ಐ.ಡಿ ಶುಗರ್ ಫ್ಯಾಕ್ಟರಿಯ ಅಧಿಕಾರಿಗಳು (Management team) ಈ ಕೂಡಲೇ ಇವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಹಾಗೂ ಕೆರೆ, ಹಳ್ಳಗಳಿಗೆ ವಿಷಪೂರಿತ ನೀರನ್ನು ಬಿಡುವುದನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ಹಾಗೂ ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ಈ ವರದಿಯನ್ನು ಕಂಡು ಶುಗರ್ ಫ್ಯಾಕ್ಟರಿಯವರು ಹಾಗೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಾರಾ? ಕಾದು ನೋಡಬೇಕಿದೆ.

ವರದಿ: ಮುತ್ತಪ್ಪ ಬಡಿಗೇರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago