Latest

ಹೆಚ್ಚುತ್ತಿದೆ ಡೆಂಗ್ಯೂ; ಮುಡಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಇಲ್ಲ ಆದ್ಯತೆ!

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು ಹೋಗುತ್ತಿಲ್ಲ ಅದರಲ್ಲಿ ಮಣ್ಣು, ಕಸ, ಪ್ಲಾಸ್ಟಿಕ್ ಹಾಗೂ ಪೊದೆಗಳು ಸಹ ಬೆಳೆದುಕೊಂಡಿದೆ. ನೀರು ಹೋಗಲು ಜಾಗವಿಲ್ಲದೆ ಅಲ್ಲೇ ನಿಲುತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಚರಂಡಿಗಳಲ್ಲಿ ನೀರು ನಿತ್ತು ಕೊಳೆಯುತ್ತಿದೆ ಆ ನೀರು ನಿಂತಿರುವ ಜಾಗದಿಂದಲೇ ಸೊಳ್ಳೆಗಳು ಸಹ ಬರುತ್ತಿವೆ. ಅಷ್ಟೇ ಅಲ್ಲ ಇನ್ನು ಚಾನೆಲ್, ಮೋರಿಗಳ ಮೇಲೆ ಕೊಳೆತು ಹೋಗಿರುವ ಪದಾರ್ಥ ಹಾಗೂ ಮನೆಯಲ್ಲಿ ಮೂರು ನಾಲ್ಕು ದಿನ ಇಟ್ಟುಕೊಂಡಿರುವ ಮುಸುರೆ ನೀರನ್ನು ಸಹ ಹಾಕುತ್ತಾರೆ. ಪೊದೆ ಬೆಳೆದುಕೊಂಡು ಮೋರಿಯು ಸಹ ಕಾಣಿಸುತ್ತಿಲ್ಲ, ನೀರು ಹೋಗಲುದಾರಿನು ಇಲ್ಲ. ಅಲ್ಲೇ ನೀರು ನಿಲ್ಲುತ್ತದೆ ಅಲ್ಲೂ ಸಹ ಮೊದಲೇ ಹೇಳಿದಂತೆ ಸೊಳ್ಳೆಗಳು ಬರುತ್ತಿವೆ. ಸೊಳ್ಳೆ ಹೆಚ್ಚಾದ ಕಾರಣ ಬರುವ ಡೆಂಗ್ಯೂ ಕಾಯಿಲೆ ಇಂದ ಜನರಿಗೆ ಸಮಸ್ಯೆ ಆಗುತ್ತದೆ. ಇದರ ಬಗ್ಗೆ ಮುಡುಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಭದ್ರಾಚಾರಿಯವರು ಕಾಳಜಿ ವಹಿಸಬೇಕು ಇಲ್ಲದಿದ್ದರೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಸಾಕಷ್ಟು ಜನ ಕಯಿಲ್ಲೆ ಬೀಳುತ್ತಾರೆ ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.

ವರದಿ: ನಜೀರ್ ಅಹಮದ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago