ಮುಂಡಗೋಡ: ಭಾರತೀಯ ಜನತಾ ಪಾರ್ಟಿ ಮುಂಡಗೋಡ ಮಂಡಲ ವತಿಯಿಂದ ಸನ್ಮಾನ್ಯ ನರೇಂದ್ರ ಮೋದಿಯವರ 72ನೇ ಜನ್ಮದಿನದ “ಸೇವಾ ಪಾಕ್ಷಿಕ” ಅಂಗವಾಗಿ ಮುಂಡಗೋಡ ತಾಲೂಕಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡಲಾಯಿತು.
ನಂತರ ಛತ್ರಪತಿ ಶಿವಾಜಿ ಸರ್ಕಲ್ ನಲ್ಲಿ ಉಪಹಾರ ಸೇವಾ ಕಾರ್ಯಕ್ರಮವನ್ನು ನಡೆಸಲಾಯಿತು.
ಉಪಹಾರ ಸೇವಾ ಕಾರ್ಯವನ್ನು ಉಮೇಶ್ ಬಿಜಾಪುರ ರವರು ನೀಡಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ್ ಹಾವಣಗಿ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ, ವಿಠ್ಠಲ್ ಬಾಳಂಬೀಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಚಲವಾದಿ, ರೇಖಾ ಅಂಡಗಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ತಳವಾರ,ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು ಪಟ್ಟಣ ಪಂಚಾಯತಿ ಸರ್ವ ಸದಸ್ಯರು ಪ್ರಮುಖರಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರವಿಗೌಡ ಪಾಟೀಲ ತುಕಾರಾಂ ಇಂಗಳೆ , ವೀಣಾ ಒಸಿಮಠ ,ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಲೆಸಮ್ಮಾ ಥಾಮಸ್ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಎಫ್ ಎಚ್.

error: Content is protected !!