Latest

ಬನವಾಸಿ ಕದಂಬೋತ್ಸದ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ಧತೆಗಳನ್ನು
ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ, ವಿಡೀಯೋ ಕಾನ್ಸರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.

ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ, ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸೂಚಿಸಿದರು.

ಪ್ರಸ್ತುತ ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು, ಕೆ.ಎಸ್.ಆರ್.ಟಿ.ಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು, ವಸತಿ ಮತ್ತು ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರವಹಿಸಬೇಕು, ಅಕರ್ಷಕ ವೇದಿಕೆ ನಿರ್ಮಾಣ ಮತ್ತು ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರು.

ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ಅಗತ್ಯವಿದ್ದಲ್ಲಿ ಉಪ ಸಮಿತಿಗಳನ್ನು ರಚಿಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಶುಕ್ರವಾರದ ಒಳಗೆ ಎಲ್ಲಾ ಸಮಿತಿಗಳು ಸಭೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಎಲ್ಲಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಹಾಜರಿದ್ದರು.

ಭ್ರಷ್ಟರ ಬೇಟೆ

Recent Posts

ಮಲಗೋಕೆ ಹಣ ಕೇಳ್ತಾಳೆ, ಮಕ್ಕಳು ಬೇಡ ಅಂತಾಳೆ ಎಂದು ದೂರಿದ ಗಂಡ; ಗಂಡನ ಕಂಜೂಸ್ ಬುದ್ದಿ ಬಿಚ್ಚಿಟ್ಟ ಹೆಂಡತಿ…!

ಮದುವೆಗೆ ಒಪ್ಪಿಕೊಂಡ ಹೆಂಡತಿ, ಆದರೆ ಮಕ್ಕಳನ್ನು ಮಾಡಿಕೊಳ್ಳಲು ನಿರಾಕರಿಸಿದ್ದಾಳೆ ಎಂದು ಗಂಡನಿಂದ ಪೊಲೀಸರಿಗೆ ದೂರು. ಈ ಪ್ರಕರಣದಲ್ಲಿ ಗಂಡನ ಆರೋಪಗಳ…

1 hour ago

7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ- ಬಳ್ಳಾರಿಯಲ್ಲಿ ಬಿಜೆಪಿ ಮುಖಂಡ ಅರೆಸ್ಟ್..!

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಿಜೆಪಿ ಯುವ ಮುಖಂಡ ದೇವು ನಾಯಕ್ (Devu Nayak) ಮೇಲೆ…

1 hour ago

39ನೇ ವಯಸ್ಸಿನಲ್ಲಿ ಅಜ್ಜಿಯಾಗಿರುವ ಚೀನಾದ ಮಹಿಳೆ! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ಅಜ್ಜಿ ಎಂದರೆ ನಮ್ಮ ಕಣ್ಣಿಗೆ ಮೂಡುವ ಚಿತ್ರಣವು 60 ವರ್ಷ ಮೇಲ್ಪಟ್ಟ, ಬೆಳ್ಳಿ ಕೂದಲಿನ ಮಹಿಳೆ. ಆದರೆ, 39ನೇ ವಯಸ್ಸಿನಲ್ಲಿ…

1 hour ago

ನಾಗ್ಪುರ ಹಿಂಸಾಚಾರ: ಮಹಿಳಾ ಪೊಲೀಸರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ಬಂಧನ

ನಾಗ್ಪುರದಲ್ಲಿ ನಡೆದ ಹಿಂಸಾಚಾರದ ಬಳಿಕ ಮಹಾರಾಷ್ಟ್ರ ಪೊಲೀಸರು ತೀವ್ರವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ (FIR) ಪ್ರತಿಗಳು ಬಹಿರಂಗಗೊಂಡಿದ್ದು,…

1 hour ago

ಮಂಡ್ಯ ಅನಾಥಾಶ್ರಮ ವಿಷಾಹಾರ ಪ್ರಕರಣ: ತನಿಖೆ ಚುರುಕು, ಹೋಟೆಲ್ ಮಾಲೀಕನ ಮೇಲಿನ ದ್ವೇಷವೇ ಕಾರಣ?

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಹೊಸ ತಿರುವು ದೊರಕಿದೆ. ಆಹಾರ…

1 hour ago

ಮೀನು ಕದ್ದ ಆರೋಪ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಗೆ ಅಮಾನುಷ ಹಲ್ಲೆ – ನಾಲ್ವರು ಬಂಧನ

ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕಳವು ಆರೋಪ ಮಾಡಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ…

2 hours ago