Latest

ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ತಮಿಳುನಾಡಿನ ನಿರುದ್ಯೋಗಿಯೋರ್ವ
ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್​​ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ?
ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್​​​ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್​​ ರೂಮ್​ಗೆ​ ಕರೆ ಮಾಡಿದ್ದಾನೆ. ಬಾಂಬ್​​ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ.
ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago