ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ ಇದರಿಂದ ಆತಂಕಗೊಂಡ ಸಾರ್ವಜನಿಕರು ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಗಳು ಬೆಳಕಿಗೆ ಬಂದಿದ್ದು ಸಾರ್ವಜನಿಕರು ತಮ್ಮ ನಗರ ಗ್ರಾಮ ಬಡಾವಣೆ ಮತ್ತು ಸುತ್ತಮತ್ತಲ್ಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಲು ಶ್ರೀಮತಿ ಇಶಾ ಪಂತ್ ಐಪಿಎಸ್ ಪೊಲೀಸ್ ಅಧೀಕ್ಷಕರು ಕಲ್ಬುರ್ಗಿ ಜಿಲ್ಲೆ ಇವರು ಸಾರ್ವಜನಿಕರ ಮಾಹಿತಿಗಾಗಿ ತಿಳಿಸಿದ್ದಾರೆ.

error: Content is protected !!