Latest

ಯುವ ಕಾಂಗ್ರೆಸ್ ನಾಯಕಿ ಅಕ್ಷತಾ ರವಿಕುಮಾರ್ ಅವರಿಗೆ ಅಶ್ಲೀಲ ಸನ್ನೆ ತೋರಿದ ಚಾಲಕ ಬಂಧನ

ಬೆಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರ ಎದುರು ಅಶ್ಲೀಲವಾಗಿ ವರ್ತಿಸಿದ್ದ ಕಾರು ಚಾಲಕನನ್ನು ಚಾಮರಾಜಪೇಟೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಸಂಜೆ, ಗೋಪಾಲನ್ ಮಾಲ್ ಸಮೀಪ ಈ ಘಟನೆ ನಡೆದಿದೆ. ಕೆಎ 41 ಎಂ 4191 ನೋಂದಣಿ ಸಂಖ್ಯೆಯ ಕಾರು ಚಾಲನೆ ಮಾಡುತ್ತಿದ್ದ ಆರೋಪಿ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಅಕ್ಷತಾ ಅವರು ಪ್ರಶ್ನೆ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಚಾಲಕ, ಅಶ್ಲೀಲವಾಗಿ ಸನ್ನೆ ತೋರಿಸಿ, ಕಾರು ಚಲಾಯಿಸಿಕೊಂಡು ಹೋಗಿದ್ದ.

ಘಟನೆಯ ನಂತರ, ಅಕ್ಷತಾ ರವಿಕುಮಾರ್ ಅವರು ತಕ್ಷಣವೇ ಚಾಮರಾಜಪೇಟೆ ಠಾಣೆಗೆ ದೂರು ನೀಡಿದರು. ದೂರು ಸ್ವೀಕರಿಸಿದ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.

ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿದ್ದು, ಮಹಿಳಾ ಸುರಕ್ಷತೆ ಕುರಿತಂತೆ ಮತ್ತೆ ಪ್ರಶ್ನೆಗಳು ಎದ್ದಿವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಗರ್ಭಿಣಿ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಅತ್ಯಾಚಾರ

ರಾಜಸ್ಥಾನದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಜೈಪುರದಲ್ಲಿ ನಡೆದ ಈ ಭೀಕರ ಘಟನೆಯಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಒಬ್ಬ ತುಂಬು…

10 minutes ago

ಭಟ್ಕಳದ ಶಿರಾಲಿ ಚೆಕ್ ಪೋಸ್ಟ್‌ನಲ್ಲಿ 13 ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು

ಭಟ್ಕಳ ತಾಲ್ಲೂಕಿನ ಶಿರಾಲಿ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ಲಾರಿಗೆ ತಡೆ ನೀಡಿದ ಸಂದರ್ಭದಲ್ಲಿ, 13 ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ರಾಜಾರೋಷವಾಗಿ ಕೊಂಡೊಯ್ಯಲಾಗುತ್ತಿತ್ತು…

24 minutes ago

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ; ಬ್ರಿಟನ್ ಜೈಲಿನಲ್ಲಿ ಸಾವು

ಬ್ರಿಟನ್‌ನ ಜೈಲೊಂದರಲ್ಲಿ 12 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿ ಮೃತಪಟ್ಟಿದ್ದಾರೆ. 31 ವರ್ಷದ ರೆಬೆಕಾ ಹೊಲ್ಲೊವೇ, ಡರ್ಹಾಮ್‌ನ ಎಚ್‌ಎಂಪಿ ಲೋ…

35 minutes ago

ಮರ್ಯಾದಾ ಹತ್ಯೆ: 7 ವರ್ಷಗಳ ಬಳಿಕ ತೀರ್ಪು

ತೆಲಂಗಾಣದ ಮಿರ್ಯಾಲಗುಡದಲ್ಲಿ 2018ರಲ್ಲಿ ನಡೆದ ಪ್ರಣಯ್ ಕುಮಾರ್ ಅವರ ಶೋಚನೀಯ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಇದೀಗ ನ್ಯಾಯಾಲಯದಿಂದ ಅಂತಿಮ ತೀರ್ಪು…

1 hour ago

ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿರುವ ರಹಸ್ಯ ಕ್ಯಾಮೆರಾ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್…

12 hours ago

100 ರೂ ಕೊಡಲಿಲ್ಲವೆಂದು ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ!

ಕೊಪ್ಪಳದ ಗಂಗಾವತಿ ಬಳಿ ನಡೆದ ವಿದೇಶಿ ಮಹಿಳೆ ಹಾಗೂ ಹೋಮ್‌ಸ್ಟೇ ಮಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ…

2 days ago