ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…