Latest

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.

ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.

ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.

ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಪಿಜ್ಜಾ ತಿನ್ನುತ್ತಾ ಬೋಲ್ಡ್ ಲುಕ್: “ಪಿಜ್ಜಾಗಿಂತ ನಿಮ್ಮ ಸೊಂಟವೇ ಹಾಟ್ ಆಗಿದೆ!” ಎಂದು ನೆಟ್ಟಿಗ ಕಾಮೆಂಟ್

ಕನ್ನಡದ ವಜ್ರಕಾಯ ನಟಿ ನಭಾ ನಟೇಶ್ ಸದಾ ತನ್ನ ಫೋಟೋಶೂಟ್‌ಗಳ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಈ…

3 hours ago

ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ..!

ಗೇಮಿಂಗ್ ಆ್ಯಪ್‌ನಲ್ಲಿ ಪರಿಚಯವಾಗಿ ಪ್ರೇಮ ಸಂಬಂಧ ಬೆಳೆಸಿ, ಗಂಡನನ್ನು ತೊರೆದು ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಇದೀಗ…

4 hours ago

ಲೋಕಾಯುಕ್ತ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲಾಕ್ ಮೈಲ್; 10 ತಿಂಗಳ ಬಳಿಕ ಆರೋಪಿ ಅಂದರ್..!

ಲೋಕಾಯುಕ್ತ ಅಧಿಕಾರಿ ಎಂದು ಭ್ರಮೆ ಹುಟ್ಟುಸಿ ಮಹಿಳಾ ಅಧಿಕಾರಿಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ 8ನೇ ತರಗತಿ ಓದಿದ ವಂಚಕನ ಕೀಳರಿಮೆ ಕೊನೆಗೊಂಡಿದೆ.…

4 hours ago

ಮೂರು ಮಕ್ಕಳನ್ನು ಕೈಗೆ ಕೊಟ್ಟು ಪ್ರೇಯಸಿಯೊಂದಿಗೆ ಪತಿರಾಯ ಎಸ್ಕೇಪ್..!

ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ…

4 hours ago

ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು

ಪಟಿಯಾಲಾದಲ್ಲಿ ಹಿರಿಯ ಸೇನಾ ಅಧಿಕಾರಿ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಮಗ ಅಂಗದ್ ಸಿಂಗ್ ಮೇಲೆ ಮೂವರು ಪಂಜಾಬ್…

1 day ago

ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…!

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು…

1 day ago